ಗ್ರಾಮ ಲೆಕ್ಕಾಧಿಕಾರಿಗಳಿಗೆ ಮುಂಬಡ್ತಿಯಲ್ಲಿ ಆಗುತ್ತಿರುವ ಅನ್ಯಾಯ ತಡೆಯಬೇಕು.
(KOLARA): ಬಂಗಾರಪೇಟೆ :ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದೆ.
ಗ್ರಾಮ ಲೆಕ್ಕಾಧಿಕಾರಿಗಳಿಗೆ ಮುಂಬಡ್ತಿಯಲ್ಲಿ ಆಗುತ್ತಿರುವ ಅನ್ಯಾಯ ತಡೆಯಬೇಕು. ಕಂದಾಯ ಇಲಾಖೆ ನೌಕರರ ಮೇಲೆ ಅನ್ಯ ಇಲಾಖೆಗಳ ಕೆಲಸದ ಒತ್ತಡವನ್ನು ಹೇರುತ್ತಿರುವುದನ್ನು ತಪ್ಪಿಸಬೇಕು.ಮೊದಲಾದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಈಗಾಗಲೇ ಕಂದಾಯ ನೌಕರರ ಕೇಂದ್ರ ಸಂಘ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೆಪ್ಟಂಬರ್ 26 ರಂದು ರಾಜ್ಯಾದ್ಯಂತ ಮುಷ್ಕರ ನಡೆಸಿ ಮನವಿ ನೀಡಿದರು.ಇದುವರೆಗೆ ಯಾವುದೇ ಕ್ರಮ ವಹಿಸಿಲ್ಲ ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಆರೋಪಿಸಿದರು.
ರಜಾ ದಿನಗಳಲ್ಲಿ ಕೆಲಸದ ಒತ್ತಡ ಹೇರುವುದನ್ನು ನಿಷೇಧಿಸಿ ಸರ್ಕಾರದಿಂದ ಆದೇಶ ಮಾಡಿದ್ದರೂ, ಹಲವಾರು ಜಿಲ್ಲೆ ಹಾಗೂ ತಾಲೂಕು ಇಲಾಖೆ ಸಿಬ್ಬಂದಿ ಕೆಲಸ ಮಾಡಬೇಕಾಗಿದೆ. ಇದರಿಂದ ಕೌಟುಂಬಿಕ ಕಲಹಗಳು ಉಂಟಾಗುತ್ತಿದ್ದು, ಮಾನಸಿಕವಾಗಿ ಹತಾಶರಾಗುತ್ತಿದ್ದಾರೆ. ಜತೆಗೆ ಅನ್ಯ ಇಲಾಖೆಯ ಕೆಲಸದ ಒತ್ತಡ, ಮುಂಬಡ್ತಿಯಲ್ಲಿ ಆಗುತ್ತಿರುವ ನಿರಂತರ ಅನ್ಯಾಯ, ಗ್ರಾಮ ಲೆಕ್ಕಿಗರ ಜ್ಯೇಷ್ಠತೆಗಳನ್ನು ಒಟ್ಟುಗೂಡಿಸಿ ಪದ ನವೀಕರಿಸುವುದು, ಪ್ರಯಾಣ ಭತ್ಯೆ ಧರವನ್ನು ಪರಿಷ್ಕರಿಸಿ ಐದು ಸಾವಿರಕ್ಕೆ ಹೆಚ್ಚಿಸುವುದು, ಜಾಬ್ ಚಾರ್ಟ್ ನೀಡುವುದು ಹಾಗೂ ಗ್ರಾಮ ಸಹಾಯಕರ ಹುದ್ದೆಯನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಎಲ್ಲ ತಾಲೂಕು ಕಚೇರಿ ಮುಂಭಾಗ ಆಯಾಯ ತಾಲೂಕಿನ ಗ್ರಾಮ ಲೆಕ್ಕಿಗರು ಲೇಖನಿ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದೇವೆ. ಇದಕ್ಕೂ ನಮ್ಮಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಎರಡನೇ ಹಂತದ ಮುಷ್ಕರವನ್ನು ಮತ್ತಷ್ಟು ಬಲಿಷ್ಠ ಗೊಳಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ಅಮರೇಶ್, ವಿನಯ್ ಕುಮಾರ್,ರಮೇಶ್,ಅವಿನಾಶ್,ಸುಜಾತಾ,ಶ್ವೇತ,ಚೇತನ್ ಕುಮಾರ್, ರವಿ, ಅಂಜಲಿ, ವಿನೋದ್, ಮಾನಸ, ನಂದಿನಿ,ಮಧು,ಅಂಬರೀಶ್, ಲಾವಣ್ಯ, ಜಗನ್ನಾಥ,ಲೋಹಿತ್ ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ