ಜಿಲ್ಲೆನ್ಯೂಸ್

ಭ್ರಷ್ಟಾಚಾರ ಮಾಡದೆ ಉತ್ತಮ ಕೆಲಸ ನಿರ್ವಹಿಸುವಂತೆ ಪಟ್ಟಣದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಎಸ್ಎನ್ ನಾರಾಯಣಸ್ವಾಮಿ

ಭ್ರಷ್ಟಾಚಾರ ಮಾಡದೆ ಉತ್ತಮ ಕೆಲಸ ನಿರ್ವಹಿಸುವಂತೆ ಪಟ್ಟಣದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಎಸ್ಎನ್ ನಾರಾಯಣಸ್ವಾಮಿ

(KOLARA): ಬಂಗಾರಪೇಟೆ : ಸರ್ಕಾರದ ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿನದ್ದು. ಅಧಿಕಾರಿಗಳು ಜನರನ್ನು ಯಾವುದೇ ಕಾರಣಕ್ಕೂ ಸತಾಯಿಸದೆ ಅವರಿಗೆ ಸೂಕ್ತ ಸಲಹೆಗಳನ್ನು ನೀಡಿ ಅವರ ಕೆಲಸಗಳನ್ನು ಮಾಡಿಕೊಡಬೇಕು ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಕರೆದಿದ್ದ ಅಧಿಕಾರಿಗಳ ಸಭೆಯನ್ನು ಕುರಿತು ಮಾತನಾಡುತ್ತಾ, ತಾಲೂಕನ್ನು ಮಾದರಿ ಕ್ಷೇತ್ರವನ್ನಾಗಿಸುವ ನನ್ನ ಕನಸಿಗೆ ಅಧಿಕಾರಿಗಳು ಸಹಕರಿಸಬೇಕು ಎಂದರು. ಅಧಿಕಾರಿಗಳು ತಮ್ಮ ಕ್ಷೇತ್ರದಲ್ಲಿ ಉತ್ತಮ ಅನುಭವವನ್ನು ಹೊಂದಿದ್ದೀರಾ ಸರ್ಕಾರಿ ಕೆಲಸ ಪಡೆದ ನೀವು ಪುಣ್ಯವಂತರು, ನಿಮ್ಮ ಭಾಗದ ಜನರಿಗೆ ಉತ್ತಮ ಸೇವೆ ನೀಡಿ, ಬಡವರಿಗೆ ಯಾವುದೇ ಕಾರಣಕ್ಕೂ ಸಮಸ್ಯೆ ಮಾಡದೆ ಮಾನವೀಯತೆ ತೋರಿ ಹೊರ ಕೆಲಸಗಳನ್ನು ಮಾಡಿಕೊಡಬೇಕು ಎಂದು ಹೇಳಿದರು.

ಭ್ರಷ್ಟಾಚಾರ ಮಾಡದೆ ಉತ್ತಮ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮೀಸಲು ಕ್ಷೇತ್ರ ಯಾವುದರಲ್ಲೂ ಹಿಂದೆ ಉಳಿಯಬಾರದು ಆದ್ದರಿಂದ ಎಲ್ಲಾ ಇಲಾಖೆಗಳು ಹೊಂದಾಣಿಕೆಯಿಂದ ಕೆಲಸ ನಿರ್ವಹಿಸಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ, ಪುರಸಭೆಯ ಮುಖ್ಯ ಅಧಿಕಾರಿ ಮೀನಾಕ್ಷಿ, ಉಪತಹಶಿಲ್ದಾರ್ ಚಂದ್ರಶೇಖರ್, ಆರ್ ಐ ಅಜಯ್ ಮೊದಲಾದವರು ಇದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code