ಪಾರದರ್ಶಕ ಮತ್ತು ಭ್ರಷ್ಠಮುಕ್ತ ಆಡಳಿತಕ್ಕೆ ಜನತಾದರ್ಶನ: ಶಾಸಕ ಎಸ್.ಎನ್.ನಾರಾಯಣಸ್ವಾಮಿ
(KOLARA): ಆಡಳಿತಕ್ಕೆ ಚುರುಕು ಮುಟ್ಟಿಸಿ ಸರ್ಕಾರಿ ಯಂತ್ರಾoಗವನ್ನು ಕ್ರಿಯಾಶೀಲಗೊಳಿಸುವುದರ ಮೂಲಕ ಜನರ ಮನೆ ಬಾಗಲಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಿ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲು ಜನತಾದರ್ಶನ ಕಾರ್ಯಕ್ರಮ ಸಹಕಾರಿಯಾಗಿದೆ ಹಾಗೂ ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಜನತಾದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಈ ಮದ್ಯೆ ಪ್ರತಿ ಗ್ರಾಮಗಳಲ್ಲಿ ಗ್ರಾಮಸಭೆ ನಡೆಸುವುದರ ಮೂಲಕ ತಾಲ್ಲೂಕು ಆಡಳಿತ ಅಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಪಾರದರ್ಶಕ ಭ್ರಷ್ಠಮುಕ್ತ ಆಡಳಿತಕ್ಕೆ ಮುನ್ನುಡಿ ಬರೆಯಲು ಜನತಾದರ್ಶನ ಪೂರಕವಾಗಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.
ಬಂಗಾರಪೇಟೆ: ಪಟ್ಟಣದ ಪುರಸಭೆ ಆವರಣದಲ್ಲಿ ಜಿಲ್ಲಾಡಳಿತ-ತಾಲ್ಲೂಕಾಡಳಿತ ಸಹಯೋಗದಲ್ಲಿ ಆಯೋಜಿಸಿದ್ದ ಜನತಾದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಡವ, ರೈತ, ಶ್ರಮಿಕ ವರ್ಗದ ಪರವಾಗಿದ್ದು, ಅವರ ಸಮಸ್ಯೆಗಳಿಗೆ ಸ್ಪಂಧಿಸಲಿದೆ ಪ್ರತಿನಿತ್ಯ ಸಾರ್ವಜನಿಕರು ಕೆಲಸ ಕಾರ್ಯಗಳನ್ನು ಬಿಟ್ಟು ಕಛೇರಿಗಳಿಗೆ ಅಲೆದಾಡುವುದು, ಮದ್ಯವರ್ತಿಗಳ ಹಾವಳಿಯಿಂದ ತಪ್ಪಿಸುವುದು ಹಾಗೂ ಸ್ಥಳದಲ್ಲೇ ಸಮಸ್ಯೆ ಬಗೆಹರಿಸುವುದು ಜನತಾದರ್ಶನದ ಪ್ರಮುಖ ಸಹಕಾರಿಯಾಗಿದೆ.
ಪ್ರಸ್ತುತ ಈ ಕಾರ್ಯಕ್ರಮ ಸಂಪೂರ್ಣವಾಗಿ ಯಶ್ವಸಿಯಾಗಿದ್ದು, 180ಕ್ಕೂ ಹೆಚ್ಚು ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಎಲ್ಲಾ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ನಡೆಸುತ್ತೇವೆ. ಹಾಗೂ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಅರ್ಜಿಗಳನ್ನು ಪಡೆದು ವಿಲೇವಾರಿ ಮಾಡಲಾಗಿದೆ. ಈ ಜನತಾದರ್ಶನ ಕಾರ್ಯಕ್ರಮಕ್ಕೆ ಪುರಸಭೆಗೆ 14ಅರ್ಜಿಗಳು, ಬೆಸ್ಕಾಂ ಇಲಾಖೆಗೆ 4 ಅರ್ಜಿಗಳು ಉಳಿದಂತೆ ಬಹುತೇಕ ಕಂದಾಯ ಇಲಾಖೆಗೆ ಸಂಬoಧಿಸಿದ್ದು, ಅತಿ ಶೀಘ್ರವಾಗಿ ಬಗೆಹರಿಸುತ್ತೇವೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಓ ಪದ್ಮಾ ಬಸಂತಪ್ಪ ಮಾತನಾಡಿ, ಸರ್ಕಾರ ಮತ್ತು ಜನರ ನಡುವೆ ಉತ್ತಮ ಬಾಂದವ್ಯ ಬೆಳೆಸಲು ಜೊತೆಗೆ ಜನರ ಸಮಸ್ಯೆಗಳನ್ನು ಸಂಪೂರ್ಣವಾಗಿ ಅರಿತು ಕೆಲಸ ಮಾಡಲು ಸರ್ಕಾರದ ಪ್ರಥಮ ಹೆಜ್ಜೆ ಜನತಾದರ್ಶನ ಕಾರ್ಯಕ್ರಮವಾಗಿದೆ, ಪ್ರಸ್ತುತ ಕಾರ್ಯಕ್ರಮದಲ್ಲಿ ಸರ್ವೆಗೆ ಸಂಬoಧಪಟ್ಟoತೆ ಅತಿ ಹೆಚ್ಚು ಅರ್ಜಿಗಳು ಬಂದಿವೆ. ಈ ಅರ್ಜಿಗಳನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಸಾರ್ವಜನಿಕರ ನೀಡುವ ಅರ್ಜಿಗಳನ್ನು ಐಪಿಜೆಆರ್ಎಸ್ ಪೋರ್ಟಲ್ನಲ್ಲಿ ದಾಖಲಿಸಲಾಗುವುದು, ಪ್ರತಿಯೊಂದು ಅರ್ಜಿಯ ವಿಲೇವಾರಿ ಎಷ್ಟು ದಿನಗಳಲ್ಲಿ ನಡೆಯುತ್ತದೆ ಎಂಬುವುದನ್ನು ಸರ್ಕಾರದ ಉನ್ನತ ಅಧಿಕಾರಿಗಳು ಪರಿಶೀಲಿಸುತ್ತಾರೆ, ಸಾರ್ವಜನಿಕರಿಗೆ ಅದಷ್ಟು ಬೇಗ ಸಮಸ್ಯೆ ಇತ್ಯರ್ಥಕ್ಕೆ ಸಹಕಾರಿಯಾಗುತ್ತದೆ ಎಂದರು.
ಪುರಸಭೆ ಮುಖ್ಯಾಧಿಕಾರಿ ಮೀನಾಕ್ಷಿ ಮಾತನಾಡಿ, ಸರ್ಕಾರದ ಈ ಕಾರ್ಯಕ್ರಮ ಪ್ರಮುಖವಾಗಿದ್ದು, ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಇದರಿಂದ ಉತ್ತಮ ಬಾಂದವ್ಯದ ಜೊತೆಯಲ್ಲಿ ಸ್ವಚ್ಛಂದ ಆಡಳಿತಕ್ಕೆ ವೇದಿಕೆಯಾಗಲಿದೆ. ಪುರಸಭೆ ವ್ಯಾಪ್ತಿಗೆ ಸಂಬoಧಪಟ್ಟoತೆ ಕೆಲವು ಅರ್ಜಿಗಳು ಬಂದಿದ್ದು, ಎರಡು ದಿನಗಳಲ್ಲಿ ಬಗೆಹರಿಸಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶು ವೈದ್ಯ ಇಲಾಖೆ, ಪುರಸಭೆ, ಕೃಷಿ ಇಲಾಖೆ-ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆಗಳ ಮಳಿಗೆಗಳನ್ನು ನಿರ್ಮಾಣ ಮಾಡಿ ಸರ್ಕಾರದಿಂದ ಬರುವ ಯೋಜನೆಗಳನ್ನು ಜನರಿಗೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಇಓ ರವಿಕುಮಾರ್, ಬಿಇಓ ಸುಕನ್ಯಾ, ಸಿಡಿಪಿಓ ಮುನಿರಾಜು, ಸಮಾಜ ಕಲ್ಯಾಣ ಅಧಿಕಾರಿ ಶಿವಾರೆಡ್ಡಿ, ಲೋಕೋಪಯೋಗಿ ಇಲಾಖೆ ಎಇಇ ರವಿಕುಮಾರ್, ಬೆಸ್ಕಾಂ ಅಧಿಕಾರಿ ರಾಮಕೃಷ್ಣ, ಆರ್ಐ ಅಜಯ್, ಪವನ್, ಚೇತನ್, ಪಿಡಿಓ ಸರಸ್ವತಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.