ಕೋಲಾರನ್ಯೂಸ್

ಗಡಿಭಾಗದ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ

ಗಡಿಭಾಗದ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ


(KOLARA) ಬಂಗಾರಪೇಟೆ: ಕನ್ನಡ ನೆಲ, ಜಲಕ್ಕಾಗಿ ಅನೇಕ ಮಹನಿಯರು ಮಹತ್ವದ ಕೋಡುಗೆಗಳು ನೀಡಿದ್ದಾರೆ. ಅವರುಗಳ ಆಚರ, ವಿಚಾರಗಳು ನಮ್ಮ ಯುವ ಜನರಿಗೆ ಪರಿಚಯಿಸಿ ಕನ್ನಡ ನಾಡು, ನುಡಿ ಉಳಿಸಿ ಬೇಳೆಸಲು ಹೆಚ್ಚಿನ ಮಹತ್ವ ನೀಡಬೇಕೆಂದು ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮಹೇಶ್ ತಿಳಿಸಿದರು.

ತಾಲೂಕಿನ ಗಡಿಭಾಗವಾದ ಬುದಿಕೋಟೆಯ ಗ್ರಾಮದ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯ ಶಾಲೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ ಮಾತನಾಡುತ್ತಾ, ಪುದಿಕೋಟೆ ಗ್ರಾಮ ಗಡಿ ಭಾಗದಲ್ಲಿರುವಂತಹ ಗ್ರಾಮ ಇಲ್ಲಿ ಕನ್ನಡ ನಮ್ಮ ಮಾತೃಭಾಷೆಯಲ್ಲ, ಅದು ನಮ್ಮ ಹೃದಯದ ಭಾಷೆಯಾಗಿದೆ.ಕನ್ನಡದ ಶ್ರೀಮಂತಿಕೆ ಮತ್ತು ಅಸ್ಮಿತೆ ಸುದೀರ್ಘ ಪರಂಪರೆಯನ್ನು ಹೊಂದಿದೆ ಎಂದು ಹೇಳಿದರು.



ಶಾಲೆಯ ವ್ಯವಸ್ಥಾಪಕರಾದ ನರೇಶ್ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಸಹ ನಾವು ನಮ್ಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ ಎಂದರು.

ಸ್ವತಂತ್ರ ಭಾರತದ ಮೊದಲ ಪ್ರಧಾನ ಮಂತ್ರಿಯಾದ ಜವಾಹರಲಾಲ್ ನೆಹರು ರವರು 1947 ರಿಂದ 1964 ರವರೆಗೆ ಅಂದರೆ ಅವರ ಮರಣದವರೆಗೂ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಮಕ್ಕಳು ಪ್ರೀತಿಯಿಂದ ಚಾಚಾ ನೆಹರು ಎಂದು ಕರೆಯುತ್ತಿದ್ದರು. ದೇಶದ ಮಕ್ಕಳಿಗೆ ಅಗತ್ಯ ಶಿಕ್ಷಣವನ್ನು ಪೂರೈಸಬೇಕೆಂಬುದು ಅವರ ಧ್ಯೇಯ ವಾಗಿತ್ತು. ಆದ್ದರಿಂದ ಅವರ ಸವಿನೆನಪಿಗಾಗಿ ಅವರ ಜನ್ಮ ದಿನಾಂಕದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.



ಅದೇ ರೀತಿ ಕನ್ನಡ ರಾಜ್ಯೋತ್ಸವವನ್ನು ಸಹ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ವ್ಯವಹಾರಕ್ಕಾಗಿ ಆಂಗ್ಲ ಭಾಷೆ ಬೇಕು, ಆದರೆ ನಾವು ಯಾವಾಗಲೂ ಕನ್ನಡ ಭಾಷೆಯನ್ನು ಮರೆಯಬಾರದು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಕೀರ್ತಿ, ಉಪ ಪ್ರಾಂಶುಪಾಲರದ ವರ್ಷ, ಶಾಲೆಯ ಮುಖ್ಯಸ್ಥರಾದ ಮಾಲಿನಿ, ಶಿಕ್ಷಕರಾದ ರಾಜಕುಮಾರ್ ಹಾಗೂ ಸಿಬ್ಬಂದಿ ವರ್ಗದವರು,ಶಾಲೆಯ ವಿದ್ಯಾರ್ಥಿಗಳು ಇದ್ದರು.

ವರದಿ ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code