News & Updatesನ್ಯೂಸ್ಶಿವಮೊಗ್ಗ

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಕಮ್ಮಟ

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಕಮ್ಮಟ

ಶಿವಮೊಗ್ಗ :- ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಹೊಳೆಹೊನ್ನೂರು ಹೋಬಳಿ ಸಮಿತಿ ಸಹಯೋಗದಲ್ಲಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸೆ. ೨೫ ರಂದು ಬೆಳಗ್ಗೆ ಯಿಂದ ಸಂಜೆವರೆಗೆ ಕಮ್ಮಟ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಗಾಗಿ ಕನ್ನಡ ಪಠ್ಯ ಆಧರಿಸಿ ಕಥೆ, ಕವನ, ಪ್ರಬಂಧ ರಚನಾ ಕಮ್ಮಟ ನಡೆಯಿತು.

ಜಾಹೀರಾತು/Advertisement

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷರಾದ ಡಿ. ಮಂಜುನಾಥ ದೀಪಬೆಳಗಿಸಿ ಉದ್ಘಾಟಿಸಿದರು. ಉಪ ಪ್ರಿನ್ಸಿಪಾಲರಾದ ಕೆ. ತಿಪ್ಪೇಶನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಹೋಬಳಿ ಅಧ್ಯಕ್ಷರಾದ ಸಿದ್ದಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಡಾ. ಕೆ. ಜಿ. ವೆಂಕಟೇಶ್, ಡಾ. ಜಿ.ಆರ್. ಲವ, ಡಯಟ್ ಉಪನ್ಯಾಸಕಿ ಜ್ಯೋತಿ ಕುಮಾರ್ ಮಾರ್ಗದರ್ಶನ ಮಾಡಿದರು. ಅನುರಾಧ, ಬಸವರಾಜ್, ಸಂಗಪ್ಪ, ಚಂದ್ರೋಜಿರಾವ್ ಭಾಗವಹಿಸಿದ್ದರು. ಶ್ರೀನಿವಾಸ್ ಸ್ವಾಗತಿಸಿದರು. ಶಿಕ್ಷಕರಾದ ನಾಗರಾಜ್ ನಿರೂಪಿಸಿದರು. ಶಿವಕುಮಾರ್ ಸೇರಿದಂತೆ ಶಾಲೆ ಯ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Scan the code