ಜಿಲ್ಲೆನ್ಯೂಸ್

ಕರವೇ ರಾಜ್ಯಾದ್ಯಕ್ಷರ ಬಂಧನ ಖಂಡಿಸಿ, ಶೀಘ್ರ ಬಿಡುಗಡೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

ಕರವೇ ರಾಜ್ಯಾದ್ಯಕ್ಷರ ಬಂಧನ ಖಂಡಿಸಿ, ಶೀಘ್ರ ಬಿಡುಗಡೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

(KOLARA): ಬಂಗಾರಪೇಟೆ :ಕನ್ನಡದಲ್ಲೂ ನಾಮಫಲಕಗಳನ್ನು ಅಳವಡಿಸಬೇಕು ಎಂದು ರಾಜ್ಯ ಸರಕಾರವೇ ಸುತ್ತೋಲೆ ಹೊರಡಿಸಿದೆ. ಸಾದಹಳ್ಳಿ ಸಮೀಪ ಏಷಿಯಾ ಆಫ್ ಮಾಲ್ ಕಂಪನಿಯವರು ಅಳವಡಿಸಿದ್ದ ನಾಮಫಲಕ ತೆರವುಗೊಳಿಸಲಾಗುತ್ತಿತ್ತು, ಈ ಸಂದರ್ಭದಲ್ಲಿ ಪೊಲೀಸರು ಕರವೇ ಅಧ್ಯಕ್ಷರಾದ ಟಿ.ಎ ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ರಾಮ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ತಾಲೂಕು ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ರಶ್ಮಿ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ನೀಡಿ ರಾಜ್ಯ ಅಧ್ಯಕ್ಷರನ್ನು ಹಾಗೂ ಕಾರ್ಯಕರ್ತರನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಕರವೇ ಜಿಲ್ಲಾ ಉಪಾಧ್ಯಕ್ಷ ನಾಗರಾಜ್ ಮಾತನಾಡಿ, ಈ ಕೂಡಲೇ ಸರ್ಕಾರ ರಾಜ್ಯಾಧ್ಯಕ್ಷ ಹಾಗೂ ಕರ್ವೆ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು ಮಾಡಿರುವುದನ್ನು ಕೈ ಬಿಡಬೇಕು ಮತ್ತು ಬಂಧಿತರಾಗಿರುವ ನಾರಾಯಣಗೌಡ ಸಿರಿದಂತೆ ಕರವೇ ಕಾರ್ಯಕರ್ತರನ್ನು ಬಿಡುಗಡೆ ಗೊಳಿಸಬೇಕೆಂದು ಒತ್ತಾಯ ಮಾಡಿದರು. ಜಿಲ್ಲೆಯಲ್ಲಿ ಹಲವು ಬಾರಿ ಕರವೇ ಯಿಂದ ಆಂಗ್ಲ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಲಾಗಿತ್ತು, ಈಗ ಮತ್ತೆ ಕೆಲ ಮಳಿಗೆಗಳ ಮಾಲೀಕರು ಆಂಗ್ಲ ನಾಮಫಲಗಳನ್ನು ಅಳವಡಿಸಿದ್ದಾರೆ. ಇದರ ವಿರುದ್ಧವು ಮುಂದಿನ ದಿನಗಳಲ್ಲಿ ಹೋರಾಟ ನಡೆಸಿ ತೆರವುಗೊಳಿಸಲಾಗುವುದು.

ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ರಾವ್ ತಾಲೂಕು ತಹಸೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು, ಒಂದು ವೇಳೆ ಕಾರ್ಯಕರ್ತರನ್ನು ಬಿಡುಗಡೆ ಮಾಡಿದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ತಾಲೂಕಿನಲ್ಲಿಯೂ ಆಂಗ್ಲ ನಾಮಫಲಕಗಳ ತೆರವು ಕಾರ್ಯಾಚರಣೆ ನಡೆಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಮಹಿಳಾ ಅಧ್ಯಕ್ಷರಾದ ಬಿ.ಎನ್.ಲೀಲಾವತಿ,ನವೀನ್, ವೇಣು, ಮನೋಜ್, ಸತೀಶ್, ಹರೀಶ್ ನವನೀತ್,ಸುಗಂಧ ,ಮಧು ಇದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code