ಕರ್ನಾಟಕ ಬಂದ್ ಕರೆಗೆ ಓಗೊಟ್ಟು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಿಕ್ಕಮಗಳೂರು ಘಟಕದ ವತಿಯಿಂದ ಜಿಲ್ಲೆಯಲ್ಲಿ ಬಂದ್ ಆಚರಿಸಲಾಯಿತು.
(Chikkamagaluru): ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದು ಖಂಡಿಸಿ ರೈತರು ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಅದು ಯಾವುದೆ ಪ್ರಯೋಜನ ಪಡೆದಿಲ್ಲ ಹಾಗಾಗಿ ಇಂದು ಕರ್ಣಾಟಕ ಬಂದ್ ಮಾಡಲಾಗಿದೆ.
ಕರ್ನಾಟಕದ ಹಲವು ಸಂಘಟನೆ ಸಂಸ್ಥೆಗಳು ಸೇರಿ ಇಂದು ಕರ್ನಾಟಕ ಬಂದ್ ಮಾಡಿದ್ದು ಕಾಫಿ ನಾಡಲ್ಲೂ ಸಹ ಕಾವೇರಿಯ ಕಿಚ್ಚು ಹೆಚ್ಚಾಗಿದೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಿಕ್ಕಮಗಳೂರು ವಿವಿಧ ಸಂಘಟನೆಗಳು ಸಹಯೋಗದಲ್ಲಿ ಹಾಗೂ ರೈತ ಸಂಘ ಇವುಗಳ ಸಂಯುಕ್ತಾಕ್ಷರದಲ್ಲಿ ಕಾವೇರಿ ನದಿ ನೀರಿನ ಹಂಚಿಕೆಯ ಕುರಿತು ಆಗುತ್ತಿರುವ ಗೊಂದಲಗಳ ಪರಿಹಾರವನ್ನು ಶೀಘ್ರವೇ ಪರಿಹರಿಸಿ ಕೊಡಬೇಕೆಂದು ರಾಜ್ಯ ಮತ್ತು ಕೇಂದ್ರ ಸರ್ಕಾರ ಗಳಿಗೆ ಆಗ್ರಪಡಿಸಲಾಯಿತು. ಕಾವೇರಿ ಹೋರಾಟಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವುಗಳನ್ನು ಪ್ರಸ್ತುತಪಡಿಸಬೇಕು ಅದಕ್ಕೆ ಧಕ್ಕೆಯಾದ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೀದಿಗಿಳಿದು ಹೋರಾಟ ಮಾಡಲು ಸಿದ್ಧವಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.
ಇಂದು ಬೆಳಗ್ಗೆ 6 ರಿಂದ ಸಂಜೆ 6 ವರೆಗೆ ಕರ್ಣಾಟಕ ಬಂದ್ ಗೆ ಕರೆ ನೀಡಿದ್ದು ಇದಕ್ಕೆ ಹೆಚ್ಚಿನ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ರಾಜ್ಯದ ವಿವಿಧಡೆ ಹಲವು ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿವೆ ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಕೆಲ ರೌಡಿಶೀಟರ್ ಗಳು ಸೇರಿದಂತೆ 150 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 2016ರಲ್ಲಿ ಕಾವೇರಿ ನೀರಿಗಾಗಿ ಕರೆ ನೀಡಿದ್ದ ಬಂದ್ ವೇಳೆ ಕಲ್ಲುತ್ತೂರು ಬೆಂಕಿ ಹಚ್ಚಿದ್ದ ಹಲವು ರೌಡಿ ಶೀಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು, ಪ್ರತಿಭಟನೆ ವೇಳೆ ಕನ್ನಡ ರಾಜು ಏಕಾಏಕಿ ‘ರಕ್ತ ಕೊಡ್ತೀವಿ, ನೀರು ಕೊಡಲ್ಲ’ ಎಂದು ಕೈ ಕೊಯ್ದುಕೊಂಡಿದ್ದಾರೆ. ಕೂಡಲೇ ಸ್ಥಳಿಯರು ಕನ್ನಡ ರಾಜುನನ್ನು ಆಸ್ಪತ್ರೆಗೆ ಕಡೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ.