ಚಿಕ್ಕಮಗಳೂರುನ್ಯೂಸ್

ಅಕ್ರಮವಾಗಿ ಸಾಗಿಸುತಿದ್ದ ಲಕ್ಷಾಂತರ ರೂಪಾಯಿ ಹಣ ಪೋಲಿಸರ ಕೈವಶ…!

ಅಕ್ರಮವಾಗಿ ಸಾಗಿಸುತಿದ್ದ ಲಕ್ಷಾಂತರ ರೂಪಾಯಿ ಹಣ ಪೋಲಿಸರ ಕೈವಶ…!

(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ಗಡಿಭಾಗ ಸೇರಿದಂತೆ ಹಲವೆಡೆ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದ್ದು, ಕಡೂರು ತಾಲೂಕಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ.ವಶಕ್ಕೆ ಪಡೆಯಲಾಗಿದೆ.

ಕಡೂರು ಪಟ್ಟಣದ ಜೈನ್‌ ರಸ್ತೆಯಲ್ಲಿ ತಪಾಸಣೆ ನಡೆಸುತ್ತಿರುವ ವೇಳೆ, ಇಬ್ಬರು ವ್ಯಕ್ತಿಗಳು ದಾಖಲೆ ಇಲ್ಲದೆ 13.10 ಲಕ್ಷ ರೂ  ಸಾಗಿಸುತ್ತಿರುವುದು ಕಂಡುಬಂದಿದ್ದು, ತಕ್ಷಣವೇ ಇಬ್ಬರನ್ನು ತಪಾಸಣೆಗೆ ಒಳಪಡಿಸಿ 13.10 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.

ಇದಕ್ಕೇ ಸಂಭಂದಿಸಿದಂತೆ ಜಿಲ್ಲಾ ಪೊಲೀಸ್‌ ಇಲಾಖೆಯು ಲೋಕಸಭೆ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು  ಕಟ್ಟುನಿಟ್ಟಿನ ಕ್ರಮ ಕೈ ಗೊಂಡಿದೆ.

Leave a Reply

Your email address will not be published. Required fields are marked *

Scan the code