ಚಿಕ್ಕಮಗಳೂರುನ್ಯೂಸ್

ಮಾರಾಟ ಪರವಾನಗಿ ಇಲ್ಲದೆ ಅಕ್ರಮವಾಗಿ ಇಟ್ಟಿದ್ದ ಲಕ್ಷ ಬೆಲೆಬಾಳುವ ಕೀಟನಾಶಕ ವಶ.

ಮಾರಾಟ ಪರವಾನಗಿ ಇಲ್ಲದೆ ಅಕ್ರಮವಾಗಿ ಇಟ್ಟಿದ್ದ ಲಕ್ಷ ಬೆಲೆಬಾಳುವ ಕೀಟನಾಶಕ ವಶ.

(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಕುಂಬಾರ ಬೀದಿಯ ತೌಸೀಫ್ ಅಹಮದ್ ಎಂಬುವರಿಗೆ ಸೇರಿದ ಮನೆಯಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಸಂಗ್ರಹ ಮಾಡಿ ಇರಿಸಿದ್ದ ಕೀಟನಾಶಕವನ್ನು ಮಾಹಿತಿ ಆಧರಿಸಿ ತಂಡ ದಾಳಿ ನಡೆಸಿ ವಶಕ್ಕೆ ಪಡೆದಿದೆ.

ಕೀಟನಾಶಕ ಮಾರಾಟ ಪರವಾನಗಿ ಇಲ್ಲದೇ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು ₹5.71 ಲಕ್ಷ ಮೌಲ್ಯದ ಕೀಟನಾಶಕಗಳನ್ನು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತಾ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಕೀಟನಾಶಕಗಳನ್ನು ವಶಪಡಿಸಿಕೊಂಡಿದ್ದಾರೆ.

ದಾಳಿ ನಡೆಸಿದಾಗ ಸುಮಾರು 6 ಕಂಪನಿಗಳಿಗೆ ಸೇರಿದ ಒಟ್ಟು ₹5. 71ಲಕ್ಷ ಮೌಲ್ಯದ ಕೀಟನಾಶಕಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಕಂಡು ಬಂದಿದೆ. ಕೀಟನಾಶಕಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮಕ್ಕೆ ಮುಂದಾಗಿದೆ. ದಾಳಿ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ತಿಮ್ಮನಗೌಡ ಎಸ್.ಪಾಟೀಲ್, ಎಸ್ ವೆಂಕಟೇಶ ಚವ್ಹಾಣ್, ಕೃಷಿ ಅಧಿಕಾರಿ ಶ್ರೀನಿವಾಸ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿದ್ದರು.

Leave a Reply

Your email address will not be published. Required fields are marked *

Scan the code