ನ್ಯೂಸ್ಶಿವಮೊಗ್ಗ

ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಲಿ : ಸಿ.ಪಿ. ಈರೇಶಗೌಡ

ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಲಿ : ಸಿ.ಪಿ. ಈರೇಶಗೌಡ

(SHIVAMOGA): ಸೊರಬ: ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ರೇಸಿಗೆ ಕಾಂಗ್ರೆಸ್ ಪಾಳಯದಲ್ಲಿ ಪೈಪೋಟಿ ಎದ್ದಿದ್ದು ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿರುವುದು ಎಲ್ಲರಿಗೂ ತಿಳಿದಿದೆ. ಇದೀಗ ಸಿಎಂ ಸ್ಥಾನವನ್ನು ವೀರಶೈವ ಲಿಂಗಾಯತ ಸಮುದಾಯದವರಿಗೆ ಮೀಸಲಿಡಬೇಕೆಂಬ ಆಗ್ರಹ ಕೇಳಿಬಂದಿದ್ದು, ಈ ಸಮುದಾಯದವರಿಗೆ ಒಕ್ಕಲಿಗರ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕೆಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಆಗ್ರಹಿಸಿದೆ.


ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಮುಂದೂ ತಾನೇ ಅಭ್ಯರ್ಥಿ ಎಂದಿದ್ದರೂ ಕೂಡ ಒಕ್ಕಲಿಗ ಪಾಳಯ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಬಣವೂ ಕೂಡ ಸರ್ಕಾರ ರಚನೆಯ ಪೂರ್ವ ಮಾತಿನಂತೆ ಡಿಕೆಶಿಗೆ ಸಿಎಂ ಸ್ಥಾನವನ್ನು ಬಿಟ್ಟುಕೊಡುವಂತೆ ಬೆನ್ನುಬಿದ್ದಿದ್ದೆ.ಅದರಂತೆ ಒಕ್ಕಲಿಗ ಸಮುದಾಯಕ್ಕೆ ಸಿಎಂ ಸ್ಥಾನ ಬಿಟ್ಟುಕೊಟ್ಟ ಬಳಿಕ ಕಾಂಗ್ರೆಸ್ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ನೀಡಬೇಕೆಂಬುದು ಈಗ ಮುನ್ನಲೆಗೆ ಬಂದಿದೆ.
ವೀರಶೈವ ಲಿಂಗಾಯತ ಸಮುದಾಯದಿಂದ ಈಶ್ವರಖಂಡ್ರೆ, ಎಂ.ಬಿ.ಪಾಟೀಲ್, ಸಂಗಮೇಶ್ವರ ಭದ್ರಾವತಿ, ಶಾಮನೂರು ಶಿವಶಂಕರಪ್ಪ ಸೇರಿದಂತೆ ಮತ್ತಿತ್ತರಿದ್ದು, ಇವರಲ್ಲಿ ಯಾರಿಗಾದರೂ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಧ್ಯ ಕರ್ನಾಟಕ ಅಧ್ಯಕ್ಷ ಸಿ.ಪಿ.ಈರೇಶ್‌ಗೌಡ ಪತ್ರಿಕಾ ಪ್ರಕಟಣೆ ಮೂಲಕ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ.

ವರದಿ: ಸಂದೀಪ್ ಯು ಎಲ್, ಸೊರಬ

Leave a Reply

Your email address will not be published. Required fields are marked *

Scan the code