LatestNews & Updatesದೇಶ

ಪತ್ನಿಯ ಕೈಗೆ ಹಗ್ಗ ಕಟ್ಟಿ ಬಾವಿಗೆ ಇಳಿಸಿ ವಿಕೃತಿ ಮೆರೆದ ಪತಿ, ವರದಕ್ಷಿಣೆ ಕೊಡಲಿಲ್ಲ ಎಂದು ಕಿರುಕುಳ

ಪತ್ನಿಯ ಕೈಗೆ ಹಗ್ಗ ಕಟ್ಟಿ ಬಾವಿಗೆ ಇಳಿಸಿ ವಿಕೃತಿ ಮೆರೆದ ಪತಿ, ವರದಕ್ಷಿಣೆ ಕೊಡಲಿಲ್ಲ ಎಂದು ಕಿರುಕುಳ

( ಮಧ್ಯಪ್ರದೇಶ- ಸೆ – 05 ) ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ದೌರ್ಜನ್ಯ ಹೆಚ್ಚಾಗಿದ್ದು ಇಲ್ಲೊಬ್ಬ ವರದಕ್ಷಿಣೆ ಬೇಕೆಂದು ಪತ್ನಿ ಕೈಗೆ ಹಗ್ಗ ಕಟ್ಟಿ ಬಾವಿಗೆ ಇಳಿಬಿಟ್ಟ ಘಟನೆ ನಡೆದಿದೆ.

ಹೆಣ್ಣು ಮಕ್ಕಳು ಮದುವೆ ಜೀವನದ ಅನೇಕ ಕನಸು ಕಟ್ಟಿಕೊಂಡು ತವರನ್ನು ಬಿಟ್ಟು ಮದುವೆಯಾಗಿ ಹೋದ ಪತ್ನಿ ವರದಕ್ಷಿಣೆ ನೀಡಲಿಲ್ಲ ಎಂದು ಪತಿಯೊಬ್ಬ ಆಕೆಯ ಕೈಗೆ ಹಗ್ಗ ಕಟ್ಟಿ ಬಾವಿಗೆ ಇಳಿಬಿಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ತವರುಮನೆಯಿಂದ ಐದು ಲಕ್ಷ ರೂ. ವರದಕ್ಷಿಣೆ ತರುತ್ತೇನೆ ಎಂದು ಹೇಳುವವರೆಗೂ ಮೇಲಕ್ಕೆತ್ತುವುದಿಲ್ಲ ಎಂದು ಚಿತ್ರಹಿಂಸೆ ನೀಡಿದ್ದಾನೆ. ಈ ಘಟನೆ ಆಗಸ್ಟ್ 20 ರಂದು ನೀಮಚ್‌ನಲ್ಲಿ ಸಂಭವಿಸಿದೆ.  ಮಾಹಿತಿ ಪ್ರಕಾರ, ದೌರ್ಜನ್ಯ ಎಸಗಿದ ವ್ಯಕ್ತಿ ರಾಕೇಶ್ ಕಿರ್ ಎಂದು ಗುರುತಿಸಲಾಗಿದೆ,ವ್ಯಕ್ತಿ ತನ್ನ ಪತ್ನಿ ಉಷಾಳ ಕೈಗಳನ್ನು ಕಟ್ಟಿ ಬಾವಿಯಲ್ಲಿ ತೂಗುಹಾಕಿದ್ದ. ಬಳಿಕ ವಿಡಿಯೋವನ್ನು ಪತ್ನಿಯ ಸಂಬಂಧಿಕರಿಗೆ ಕಳುಹಿಸಿದ್ದು, ಬಳಿಕ ಗ್ರಾಮದ ಕೆಲವರನ್ನು ಸಂಪರ್ಕಿಸಿ ಮಗಳನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ರಾಕೇಶ್‌ನನ್ನು ಬಂಧಿಸಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ಆರೋಪಿ ವರದಕ್ಷಿಣೆಗಾಗಿ 3 ರಿಂದ 5 ಲಕ್ಷ ರೂ. ಸದಾ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.ಉಷಾ ಅವರಿಗೆ 3 ವರ್ಷಗಳ ಹಿಂದೆ ಮಧ್ಯಪ್ರದೇಶದ ಜಾವಾದ್‌ನ ಕಿರ್ಪುರ ನಿವಾಸಿ ರಾಕೇಶ್ ಕೀರ್ ಎಂಬುವವರೊಂದಿಗೆ ವಿವಾಹವಾಗಿತ್ತು. ಅಂದಿನಿಂದ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಘಟನೆ ನಡೆದಿದೆ

Leave a Reply

Your email address will not be published. Required fields are marked *

Scan the code