ಜಿಲ್ಲೆನ್ಯೂಸ್

ಫೆ.4 ರಂದು ಮಡಿವಾಳ ಮಾಚಿದೇವ ಜಯಂತೋತ್ಸವ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮ.

ಫೆ.4 ರಂದು ಮಡಿವಾಳ ಮಾಚಿದೇವ ಜಯಂತೋತ್ಸವ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮ.

(SHIVAMOGGA): ಸೊರಬ: ಶ್ರೀ ಮಾಚಿದೇವ ಮಡಿವಾಳ ಸಂಘದ ವತಿಯಿಂದ ಫೆಬ್ರವರಿ ನಾಲ್ಕರ ಭಾನುವಾರ ಬೆಳಗ್ಗೆ 10 ಗಂಟೆಗೆ ಪುರಸಭೆ ವ್ಯಾಪ್ತಿಯ ಕರಡಿಗೆರೆ ಗ್ರಾಮದಲ್ಲಿ ಮಡಿವಾಳ ಮಾಚಿದೇವ ಜಯಂತೋತ್ಸವ, ಮಡಿವಾಳ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಚಿವ ಮಧು ಬಂಗಾರಪ್ಪನವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಗುಡ್ಡಪ್ಪ ಕೆ.ಪಿ ತುಮರಿಕೊಪ್ಪ ಹೇಳಿದ್ದಾರೆ.

Madiwala Machideva


ಪಟ್ಟಣದಲ್ಲಿ ವೆಸ್ಟರ್ನ್ ಘಾಟ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗ ಗುರುಮಠದ ಡಾ. ಬಸವ ಮಾಚಿದೇವ ಮಹಾ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಚಿವ ಎಸ್ ಮಧು ಬಂಗಾರಪ್ಪ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಗೌರವ ವೇದಿಕೆಯ ಸಲಹೆಗಾರ ಎಚ್ ರವಿಕುಮಾರ್, ಡಾಕಪ್ಪ ರಿಪ್ಪನಪೇಟೆ, ಯೋಗೇಶ್ವರಿ ವಿಜಯ್, ಸದಾಶಿವಪ್ಪ, ಗಣಪತಿ ಎನ್, ಅರುಣ್ ಕುಮಾರ್, ಸಿಪಿ ತುಳುಜಪ್ಪ ಸೇರಿದಂತೆ ಸಮಾಜದ ಪ್ರಮುಖರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಈ ಸಂದರ್ಭದಲ್ಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಈ ಕಾರ್ಯಕ್ರಮಕ್ಕೆ ಮಾಚಿದೇವ ಮಡಿವಾಳ ಸಮಾಜ ಬಾಂಧವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡುವಂತೆ ಅವರು ಕೋರಿದ್ದಾರೆ.

ವರದಿ: ಸಂದೀಪ ಯು.ಎಲ್. ವೆಸ್ಟರ್ನ್ ಘಾಟ್ ನ್ಯೂಸ್, ಸೊರಬ

Leave a Reply

Your email address will not be published. Required fields are marked *

Scan the code