ಮಕ್ಕಳ ಪ್ರತಿಭೆಗೆ ಹೆಚ್ಚಿನ ಒತ್ತು ನೀಡಬೇಕು. ಶಾಸಕ ಗೋಪಾಲ ಕೃಷ್ಣ ಬೇಳೂರು
(SHIVAMOGA): ಸಾಗರ-ನ:18/ ಪ್ರತಿಭೆ ಯಾರ ಸೊತ್ತು ಅಲ್ಲ ಎಂದು ಶಾಸಕ ಗೋಪಾಲ ಕೃಷ್ಣ ಬೇಳೂರು ಹೇಳಿದರು ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಇಲ್ಲಿನ ಸರ್ಕಾರಿ ಪ್ರೌಢಶಾಲೆ ಸುಭಾಷ್ ನಗರ ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರೌಢಶಾಲಾ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಹೊರಹಾಕುವ ಕೆಲಸ ಆಗಲಿ,
ನಿರಂತರ ಪರಿಶ್ರಮದಿಂದ ಮಾತ್ರ ಮಾತ್ರ ಗುರಿಯನ್ನು ಸಾಧಿಸಲು ಸಾಧ್ಯ, ಇಂತಹ ವೇದಿಕೆ ಪ್ರತಿಭೆಗಳಿಗೆ ಸೂಕ್ತ ಅವಕಾಶ ನೀಡುವ ಮೂಲಕ ಸದಾ ಕ್ರಿಯಾಶೀಲವಾಗಿ ಇರುವಂತೆ ಮಾಡಲಾಗುತ್ತದೆ ಮಕ್ಕಳಿಗೆ ಸೃಜನಶೀಲತೆಯ ಮೂಡಿಸುವಂತಹ ಕೆಲಸ ಆಗಬೇಕಾಗಿದೆ ಮಕ್ಕಳಿಗೆ ಹೆಚ್ಚು ಒತ್ತಡ ಹಾಕದೆ ಲವಲವಿಕೆಯಿಂದ ಇರುವಂತಾಗಬೇಕಾಗಿದೆ ಶೈಕ್ಷಣಿಕವಾಗಿ ತಾಲೂಕು ವಿಶಿಷ್ಟವಾಗಿ ಬೆಳೆಯುತ್ತಿದ್ದು ಸಾಗರ ತಾಲೂಕಿನಲ್ಲಿ ಹೆಚ್ಚು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರುತ್ತವೆ. ಅದರಲ್ಲೂ ಮಕ್ಕಳ ಪ್ರತಿಭೆಗಳು ಹೆಚ್ಚು ಹೆಚ್ಚು ಅನಾವರಣ ಆಗುತ್ತಿರುವುದು ಅಭಿನಂದನೆಯಾಗಿದೆ ಶಿಕ್ಷಕರು ಪೋಷಕರು ಹೆಚ್ಚು ಗಮನಹರಿಸುವಲ್ಲಿ ನಿರತರಾದಲ್ಲಿ ಮತ್ತಷ್ಟು ಪ್ರತಿಭೆಗಳು ಬರಬರಲು ಸಾಧ್ಯವಾಗುತ್ತದೆ ಸಾಗರ ಸಾಹಿತ್ಯ ಹಾಗೂ ಸಾಂಸ್ಕೃತಿಕವಾಗಿ ಹೆಚ್ಚು ಶ್ರೀಮಂತವಾಗಿದೆ ಇಂತಹ ನೆಲದಲ್ಲಿ ಪ್ರತಿಭಾವಂತರಿಗೆ ಯಾವುದೇ ಕೊರತೆ ಇಲ್ಲ ಇಲ್ಲಿ ನಿರಂತರವಾಗಿ ಸಾಂಸ್ಕೃತಿಕ ನಿತ್ಯಯೋತ್ಸವ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ ಶಿಕ್ಷಣ ಇಲಾಖೆ ಉತ್ತಮವಾದ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಅಭಿನಂದನೆಗಳು ಎಂದವರು ಹೇಳಿದರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಗರಸಭೆಯ ಸದಸ್ಯರಾದ ರಾಮು ಮಾತನಾಡಿ ಮನಸು ಮನಸುಗಳನ್ನು ಕಟ್ಟುವ ಕೆಲಸ ಆಗಬೇಕಾಗಿದೆ ಅದು ಸಾಂಸ್ಕೃತಿಕ ಚಟುವಟಿಕೆಗಳಿಂದ ಮಾತ್ರ ಸಾಧ್ಯವಾಗುತ್ತದೆ.
ಮಕ್ಕಳ ಪ್ರತಿಭೆಗಳಿಗೆ ಸೂಕ್ತ ವೇದಿಕೆ ನೀಡುತ್ತಿರುವುದು ಅಭಿನಂದನೆಯ ಎಂದವರು ಹೇಳಿದರು ಈ ಸಂದರ್ಭದಲ್ಲಿ ಜನಾರ್ದನ ಪೂಜಾರಿ ಅಧ್ಯಕ್ಷತೆಯನ್ನು ವಹಿಸಿದ್ದರು ಮಹಾಬಲೇಶ್ವರ್, ಪ್ರೇಮಕುಮಾರಿ, ಲಕ್ಷ್ಮಣ್ ನಾಯಕ್, ಸುಬ್ರಮಣ್ಯ, ಪರಶುರಾಮಪ್ಪ ಸದಾನಂದ ಮೊದಲಾದವರು ಉಪಸ್ಥಿತರಿದ್ದರು.
ವರದಿ: ರಾಘವೇಂದ್ರ ತಾಳಗುಪ್ಪ
ರೈತರಿಗೆ ಬೆಳೆ ವಿಮೆ ಪರಿಹಾರ ಪಾವತಿ: ಸಂಕಷ್ಟದಲ್ಲಿ ವರದಾನ