ಪಟ್ಟಣದ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ
(KOLARA): ಬಂಗಾರಪೇಟೆ :ವಿದ್ಯಾರ್ಥಿ ಜೀವನದಲ್ಲಿ ಸಮಯ ಅತ್ಯಮೂಲ್ಯವಾಗಿದೆ. ಶಾಲೆ ಬಿಡುವಿನ ಸಮಯವನ್ನು ಹಾಳು ಮಾಡದೆ ಗ್ರಂಥಾಲಯದಲ್ಲಿ ಲಭ್ಯವಿರುವ ಕತಿಗಳನ್ನು ಅಧ್ಯಯನ ಮಾಡಬೇಕು ಎಂದು ದಲಿತ ಶಕ್ತಿ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಂ ಎನ್ ಭಾರದ್ವಾಜ್ ಹೇಳಿದರು.
ಪಟ್ಟಣದ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಡಗರದಿಂದ ಆಚರಿಸುವ ಮೂಲಕ ಓದುಗರಲ್ಲಿ ಪುಸ್ತಕ ಓದುವ ಮನೋಭಾವ ಹೆಚ್ಚಾಗುತ್ತದೆ. ಗ್ರಂಥಾಲಯದಲ್ಲಿ ಎಲ್ಲ ಪುಸ್ತಕಗಳು ಲಭ್ಯವಿದ್ದು, ಓದುಗರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿದ್ಯಾ ರ್ಥಿಗಳು ಸತತ ಅಧ್ಯಯನ ಮತ್ತು ಕಠಿಣ ಪರಿಶ್ರಮದಿಂದ ಓದಿದ್ದರೆ ಗುರಿ ಮಟ್ಟಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಗ್ರಂಥಾಲಯದ ಸಿಬ್ಬಂದಿ ವರ್ಗದವರು ಹಾಗೂ ಮೊದಲಾದವರು ಇದ್ದರು.
ವರದಿ ವಿಷ್ಣು ಕೋಲಾರ