ಕೋಲಾರನ್ಯೂಸ್

ನಕಲಿ ಬಿತ್ತನೆ ಬೀಜ ಕೀಟನಾಶಕ ಮಾರಾಟಗಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಪಟ್ಟಣದಲ್ಲಿ ರೈತ ಸಂಘದಿಂದ ಒತ್ತಾಯ

ನಕಲಿ ಬಿತ್ತನೆ ಬೀಜ ಕೀಟನಾಶಕ ಮಾರಾಟಗಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಪಟ್ಟಣದಲ್ಲಿ ರೈತ ಸಂಘದಿಂದ ಒತ್ತಾಯ

(KOLARA): ಬಂಗಾರಪೇಟೆ , ಅ: 14: ನಕಲಿ ಬಿತ್ತನೆ ಬೀಜ ಕೀಟ ನಾಶಕ ಮಾರಾಟಗಾರರ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಮಾಡಿ ಕಳಪೆ ಬಿತ್ತನೆ ಆಲೂಗಡ್ಡೆಯಿಂದ ನಷ್ಟವಾಗಿರುವ ರೈತರಿಗೆ ಪ್ರತಿ ಎಕರೆಗೆ 2 ಲಕ್ಷ ಪರಿಹಾರ ನೀಡುವಂತೆ ರೈತ ಸಂಘದಿಂದ ನಷ್ಟ ಟೊಮೋಟೊ ಬೆಳೆ ಸಮೇತ ಹೋರಾಟ ಮಾಡಿ ಕೃಷಿ ಅಧಿಕಾರಿ ಮುನಿರಾಜುರವರ ಮೂಲಕ ಕೃಷಿ ಸಚಿವರಿಗೆ ರೈತ ಸಂಘದಿಂದ ಮನವಿ ನೀಡಿ ಒತ್ತಾಯಿಸಲಾಯಿತು.

ಬೆಳೆ ಬಂದರೆ ಬೆಲೆ ಇಲ್ಲ ಬೆಲೆ ಇದ್ದರೆ ಬೆಳೆಗೆ ಬಾದಿಸುತ್ತಿರುವ ರೋಗಗಳ ನಿಯಂತ್ರಣಕ್ಕೆ ಗುಣಮಟ್ಟದ ಔಷಧಿ ಇಲ್ಲದೆ ಲಕ್ಷಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿರುವ ಬೆಳೆ ರಕ್ಷಣೆಗೆ ಲಕ್ಷ ಲಕ್ಷ ಹಣ ನೀಡಿ ಖರೀದಿ ಮಾಡುವ ಔಷದಿಗಳನ್ನು ಸಿಂಪಡಣೆ ಮಾಡಿದರು. ಕನಿಷ್ಟ ಪಕ್ಷ ತೋಟದ ಎಲೆ ಮೇಲಿರುವ ಸೊಳ್ಳೆ ಸಹ ಸಾಯುತ್ತಿಲ್ಲ ಅಷ್ಟರ ಮಟ್ಟಿಗೆ ನಕಲಿ ಔಷದಿಗಳ ಮಾರಾಟ ದಂದೆ ನಿರಂತರವಾಗಿ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ನಾಪತ್ತೆ ಆಗಿದ್ದಾರೆಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ. ನಾರಾಯಣಗೌಡ ರೈತ ವಿರೋದಿ ನೀತಿ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕೃಷಿ ಅಧಿಕಾರಿ ಮುನಿರಾಜು ರವರು ನಕಲಿ ಬಿತ್ತನೆ ಬೀಜ ನಿಯಂತ್ರಣ ತೋಟಗಾರಿಕೆಗೆ ಬರುತ್ತದೆ ಕೀಟನಾಶಕಗಳ ನಿಯಂತ್ರಣದ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವೆ ಎಂದು ಭರವಸೆಯನ್ನು ನೀಡಿದರು.

ಹೋರಾಟದಲ್ಲಿ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ತಾಲ್ಲೂಕಾದ್ಯಕ್ಷ ಕದರಿನತ್ತ ಅಪ್ಪೋಜಿರಾವ್, ಲಕ್ಷಣ್, ಮುನಿಕೃಷ್ಣ, ವಿಶ್ವ, ಮುನಿರಾಜು, ಮುನಿಯಪ್ಪ, ಸುರೇಶ್‌ಬಾಬು, ರಾಮಸಾಗರ ವೇಣು, ಹಸಿರುಸೇನೆ ಜಿ.ಅ ಕಿರಣ್, ಜಿಲ್ಲಾ ಉಪಾದ್ಯಕ್ಷ ಚಾಂದ್‌ಪಾಷ, ಬಾಬಾಜನ್, ಯಾರಂಗಟ್ಟ ಗೀರೀಶ್, ಮುಂತಾದವರಿದ್ದರು.

Leave a Reply

Your email address will not be published. Required fields are marked *

Scan the code