ಅನುದಾನದ ಬಳಕೆ ಹಾಗೂ ಸರ್ಕಾರದ ಯೋಜನೆಗಳನ್ನು ಅನುಷ್ಠಾನ ಗೊಳಿಸುವಂತೆ ಶಾಸಕರಿಂದ ಅಧಿಕಾರಿಗಳಿಗೆ ಸೂಚನೆ
(SHIVAMOGGA): ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಇಂದು ಹೊಸನಗರದ ತಾಲ್ಲೂಕು ಪಂಚಾಯತ್ ಕಛೇರಿಯಲ್ಲಿ ಕೆ.ಡಿ.ಪಿ ಸಭೆ ನಡೆಸಿ, ವಿವಿಧ ಇಲಾಖೆಗಳ ಯೋಜನೆಗಳ ಪ್ರಗತಿ, ಅನುದಾನ ಬಳಕೆ ಹಾಗೂ ಸರ್ಕಾರದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರುವಂತೆ ಹಾಗೂ ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ಕುರಿತು ಈ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ವೇಳೆ ತೀರ್ಥಹಳ್ಳಿ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರರವರು ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ರಾಘವೇಂದ್ರ ತಾಳಗುಪ್ಪ