ಗ್ರಾಮ ಪಂಚಾಯಿತಿಗೆ ಮನವಿ ಕೊಟ್ಟರು ಸ್ಪಂದಿಸದ ಅಧಿಕಾರಿಗಳು, ಗ್ರಾಮಸ್ಥರಿಂದಲೇ ರಸ್ತೆ ನಿರ್ಮಾಣ.
(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಮೆಲ್ಪಾಲ್ ಗ್ರಾಮಂಚಾಯಿತಿ ವ್ಯಾಪ್ತಿಗೆ ಬರುವ ಕರ್ಕೇಶ್ವರ – ಗುಬ್ಬುರು ಸಂಪರ್ಕ ಕಲ್ಪಿಸುವ ರಸ್ತೆಯನ್ನು ಗ್ರಾಮಸ್ತರು ಕೈಜೋಡಿಸಿ ರಸ್ತೆ ನಿರ್ಮಿಸುತ್ತಿದ್ದಾರೆ.
ಸಾರ್ವಜನಿಕರು ಒಟ್ಟುಗೂಡಿ ಪಂಚಾಯಿತಿಗೆ ಮನವಿ ಸಲ್ಲಿಸಿದರು ರಸ್ತೆಯಲ್ಲಿ ದಿನನಿತ್ಯ ಹಲವಾರು ಗಾಡಿಗಳು ಓಡಾಡುತ್ತಿದ್ದರು ಕ್ಯಾರೆ ಮಾಡದ ಗ್ರಾಮ ಪಂಚಾಯತಿ ಅಧಿಕಾರಿಗಳು. ಮೇಲ್ಪಲ್ ಗ್ರಾಮದಲ್ಲಿ ಅಧಿಕಾರಿಗಳ ನಿರ್ಲಕ್ಷದಿಂದ ವಂಚಿತರಾಗುತ್ತಿರುವ ಸಾರ್ವಜನಿಕರು ಬೇಸತ್ತು ತಾವೇ ರಸ್ತೆ ನಿರ್ಮಾಣಕ್ಕೆ ಕೈಜೋಡಿಸಿದ್ದಾರೆ. ಗ್ರಾಮದಲ್ಲಿ ಅಪಾಯದ ವಾತಾವರಣ ಇದ್ದು ಹೆಚ್ಚಾಗಿ ಆಸ್ಪತ್ರೆಗಳಿಗೆ ತೆರಳಲು ಆಂಬುಲೆನ್ಸ್ ಬರುವ ಸಂದರ್ಭದಲ್ಲಿ ರಸ್ತೆ ಹದಗೆಟ್ಟಿ ಹೋಗಿತ್ತು. ಮೆಲ್ಪಾಲ್ ಪಂಚಾಯಿತಿ ಯಲ್ಲಿ ಕಾಂಗ್ರೆಸ್ ಅಧಿಕಾರ, ಶೃಂಗೇರಿ ಕ್ಷೇತ್ರದಲ್ಲೂ ಕಾಂಗ್ರೆಸ್ ಅಧಿಕಾರ ಹಾಗೂ ರಾಜ್ಯದಲ್ಲೂ ಕಾಂಗ್ರೆಸ್ ಅಧಿಕಾರ ವಿದ್ದರೂ ಗ್ರಾಮಸ್ಥರೇ ಸ್ವಂತ ಖರ್ಚಿನಲ್ಲಿ ಕರ್ಕೇಶ್ವರ ಗುಬ್ಬುರು ರಸ್ತೆ ನಿರ್ಮಾಣ ಮಾಡುತ್ತಿದ್ದಾರೆ.
ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡುವಂತೆ ಹಲವು ಬಾರಿ ಹಾಗೂ ರಸ್ತೆ ಸುಧಾರಣೆಗಾಗಿ ಗ್ರಾಮ ಪಂಚಾಯಿತಿ ಹಾಗೂ ಇಲಾಖೆ ಅಧಿಕಾರಿಗಳಲ್ಲಿ ಹಲವು ಬಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಲಿಲ್ಲ. ಹಾಗಾಗಿ ಊರಿನವರೇ ರಸ್ತೆ ನಿರ್ಮಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿ ಮತ್ತು ಶೃಂಗೇರಿ ಕ್ಷೇತ್ರದ ಶಾಸಕರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನಾದರೂ ಮೆಲ್ಪಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಸೂಕ್ತ ರಸ್ತೆ ಹಾಗೂ ಮೂಲಸೌಕರ್ಯಗಳನ್ನು ಒದಗಿಸಬೇಕಾಗಿ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.