ಜಿಲ್ಲೆನ್ಯೂಸ್

ಪಟ್ಟಣದ ಪಟಾಕಿ ಅಂಗಡಿ ಹಾಗೂ ಮಾಲೀಕರ ಮನೆಗಳಿಗೆ ದಿಡೀರನೆ ಅಧಿಕಾರಿಗಳ ಬೇಟಿ, ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ವಶ

ಪಟ್ಟಣದ ಪಟಾಕಿ ಅಂಗಡಿ ಹಾಗೂ ಮಾಲೀಕರ ಮನೆಗಳಿಗೆ ದಿಡೀರನೆ ಅಧಿಕಾರಿಗಳ ಬೇಟಿ, ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ವಶ


(KOLARA): ಬಂಗಾರಪೇಟೆ ಪಟ್ಟಣದ ಬಜಾರ್ ರಸ್ತೆಯಲ್ಲಿರುವ ಪಟಾಕಿ ಅಂಗಡಿಗಳಿಗೆ ಹಾಗೂ ಪಟಾಕಿ ಮಾಲೀಕರ ಮನೆಗಳಿಗೆ ದಿಡೀರನೆ ಅಧಿಕಾರಿಗಳು ಭೇಟಿ ನೀಡಿ ಲೈಸನ್ಸ್ ಇಲ್ಲದೆ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಪಟಾಕಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.


ಇತ್ತೀಚಿಗೆ ಬೆಂಗಳೂರಿನ ಅತ್ತಿಬೆಲೆಯ ಗೋದಾಮಿನಲ್ಲಿ ನಡೆದ ಪಟಾಕಿ ದುರಂತದಲ್ಲಿ 14 ಮಂದಿ ಸಚಿವ ದಹನ ಆದ ನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಕಟ್ಟುನಿಟ್ಟನ್ನು ಸೂಚಿಸಿದ ಹಿನ್ನೆಲೆಯಲ್ಲಿ ವಿವಿಧಡೆ ಸಂಗ್ರಹ ಮಾಡಿರುವ ಪಟಾಕಿ ಅಂಗಡಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆಗೆ ಮುಂದಾಗಿದ್ದಾರೆ.


ಜಿಲ್ಲಾಧಿಕಾರಿ ಸೂಚನೆಯಂತೆ ಅಧಿಕಾರಿಗಳು ಪಟ್ಟಣದ ಪಟಾಕಿ ಅಂಗಡಿಗಳು ಹಾಗೂ ಮನೆಗಳಲ್ಲಿ ಸಂಗ್ರಹಿಸಿದ್ದ ಗೋಡಾನ್ಗಳಲ್ಲಿ ಪರಿಶೀಲಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಸೂಚಿಸಲಾಗಿದ್ದು ತಪ್ಪಿದ್ದಲ್ಲಿ ಕಠಿಣ ಕ್ರಮ ಕೈಕೊಳ್ಳಲಾಗುವುದೆಂದು ಎಚ್ಚರಿಸಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ, ಪುರಸಭೆಯ ಮುಖ್ಯ ಅಧಿಕಾರಿ ಮೀನಾಕ್ಷಿ, ಪೊಲೀಸ್ ಇನ್ಸ್ಪೆಕ್ಟರ್ ಮಾರ್ಕಂಡಯ್ಯ ಹಾಗೂ ತಾಲೂಕು ಆಡಳಿತ ಸಿಬ್ಬಂದಿ ವರ್ಗದವರು ಇದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code