ನ್ಯೂಸ್ಶಿವಮೊಗ್ಗ

ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸಿದ ಸಂದರ್ಭ

ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸಿದ ಸಂದರ್ಭ

(SHIVAMOGA): ಶಿರಾಳಕೊಪ್ಪ :- ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಸಮಿತಿ, ಅಖಿಲ ಭಾರತ ವೀರಶೈವ ಮಹಾ ಸಭಾದ ಮಹಿಳಾ ಸಮಿತಿ, ಶಿವಮೊಗ್ಗ ಜನ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಅಕ್ಟೋಬರ್ 13 ರಂದು ಶಿರಾಳಕೊಪ್ಪ ವಿಕಾಸ ಶಾಲೆ ಸಭಾಂಗಣದಲ್ಲಿ ಶ್ರೀಮತಿ ಕೆ. ನಿವೇದಿತಾ ಕೆ. ರಾಜು ಅವರು ಫ.ಗು. ಹಳಕಟ್ಟಿ ಅವರ ಹೆಸರಿನಲ್ಲಿ ನೀಡಿದ ದತ್ತಿ ಕಾರ್ಯಕ್ರಮ ಉದ್ಘಾಟನೆ ಮತ್ತು ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸುವ ಸಮಾರಂಭ ನಡೆಯಿತು.

ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಉದ್ಘಾಟಿಸಿದರು. ಟಿ. ಎಂ. ಮಂಜಣ್ಣ ಅಧ್ಯಕ್ಷತೆ ವಹಿಸಿದ್ದರು. ರಾಜೇಶ್ವರಿ ವಸಂತಕುಮಾರ್, ತಾಲ್ಲೂಕು ಕಸಾಪ ಅಧ್ಯಕ್ಷರಾದ ಎಚ್. ಎಸ್. ರಘು, ಉಪನ್ಯಾಸಕರಾದ ಪಿ. ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದತ್ತಿ ದಾನಿಗಳಾದ ದಿ. ಫಕೀರವ್ವ ಅವರ ಅಗಲಿಕೆಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗೌರಮ್ಮ ಸ್ವಾಗತಿಸಿದರು. ಚಂದ್ರಶೇಖರ ನಿರೂಪಿಸಿದರು. ಕಜಾಪ ಜಿಲ್ಲಾ ಕಾರ್ಯದರ್ಶಿ ಸೋಮಿನಕಟ್ಟಿ, ಪತ್ರಕರ್ತರಾದ ಶೇಷಗಿರಿ, ಡಾ. ಮುರುಘರಾಜ್, ಉಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Scan the code