ಕೋಲಾರನ್ಯೂಸ್

ಸುಂದರಪಾಳ್ಯ ಗ್ರಾಮ ಪಂಚಾಯಿತಿ ಎದುರು ಕಲ್ಯಾಣ ಮಂಟಪದ ವಿರುದ್ಧ ಆಕ್ರೋಶ.

ಸುಂದರಪಾಳ್ಯ ಗ್ರಾಮ ಪಂಚಾಯಿತಿ ಎದುರು ಕಲ್ಯಾಣ ಮಂಟಪದ ವಿರುದ್ಧ ಆಕ್ರೋಶ.

(KOLARA): ಕರ್ನಾಟಕ ರಿಪಬ್ಲಿಕನ್ ಸಂಘಟನೆ ಯಿಂದ ಪ್ರತಿಭಟನೆ.
ಬೇತಮಂಗಲ: ಬಲಾಢ್ಯರು ರಾಜಾರೋಷವಾಗಿ ಅಕ್ರಮವಾಗಿ ಯಾವುದೇ ಅನುಮತಿ ಪಡೆಯದೆ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿದ್ದರು ಸಂಬಂಧ ಪಟ್ಟ ಅಧಿಕಾರಿಗಳು ಮೌನವಾಗಿದ್ದಾರೆಂದು ಆರೋಪಿ ಪ್ರತಿಭಟನೆ ನಡೆಸಿದರು.

ಗ್ರಾಮದ ಸಮೀಪದ ಸುಂದರಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಲ್ಲಗುಂಡ್ಲಹಳ್ಳಿ ಕ್ರಾಸ್ ನಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಕಲ್ಯಾಣ ಮಂಟಪದ ವಿರುದ್ಧ ಪ್ರತಿಭಟನೆ ನಡೆಸಿದರು.
ಕಲ್ಯಾಣ ಮಂಟಪದ ಮಾಲೀಕ ಮಂಜುನಾಥ್ ಅವರ ಪತ್ನಿಯ ಹೆಸರಿನಲ್ಲಿ ನಿರ್ಮಿಸುತ್ತಿರುವ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಯಾವುದೇ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಂದ ಅನುಮತಿ ಪಡೆಯದೆ ರಾಜಾರೋಷವಾಗಿ ನಿರ್ಮಾಣ ಮಾಡುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದರು.
ಸರ್ವೇ ನಂಬರ್ 141ರಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಕೇಂದ್ರ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಗ್ರಾಮ ಪಂಚಾಯಿತಿ ಯಿಂದ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಬೃಹತ್ ಕಟ್ಟಡವನ್ನು ಕೃಷಿ ಚಟುವಟಿಕೆ ಭೂಮಿಯಲ್ಲಿ ನಿರ್ಮಾಣ ಮಾಡುತ್ತಿರುವವ ಲಕ್ಷ್ಮೀ ಮಂಜುನಾಥ್ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕನಾಯಣ ಆಗ್ರಹಿಸಿದ್ದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಮಾತನಾಡಿ. ಈಗಾಗಲೇ ಕಲ್ಯಾಣ ಮಂಟಪ ನಿರ್ಮಾಣ ಮಾಡುತ್ತಿರುವವರಿಗೆ ಅನುಮತಿ ಪಡೆಯಲು ಮೌಖಿಕವಾಗಿ ತಿಳಿಸಲಾಗಿದೆ, ಮಾಲೀಕರು ಸಹ ದಾಖಲೆಗಳನ್ನು ಒದಗಿಸಲು ಸಮಯ ಪಡೆದಿದ್ದಾರೆ, ಸಂಘಟನೆಯ ದೂರಿನ ಮೇರೆಗೆ ಭೇಟಿ ನೀಡಿ ನೋಟಿಸ್ ನೀಡಲಾಗುವುದು.

ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕನಾಯಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ್, ತಿಮ್ಮಯ್ಯ, ತಾಲ್ಲೂಕು ಅಧ್ಯಕ್ಷೆ ರುಕ್ಮಿಣಿ, ಜಿಲ್ಲಾಧ್ಯಕ್ಷೆ ನಾರಾಯಣಮ್ಮ , ಮಣಿ, ಅಮರೇಶ, ಚಂದಪಾಷ, ಗಂಗಾಧರ, ಇಂತಿಯಜ್ ಸೇರಿದಂತೆ ಸಂಘಟನಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *

Scan the code