ಜಿಲ್ಲೆನ್ಯೂಸ್

ಪಟ್ಟಣದಲ್ಲಿ ಸಂವಿಧಾನ ಜಾಗೃತಿ ಜಾಥಾದ ಪೂರ್ವಭಾವಿ ಸಭೆ

ಪಟ್ಟಣದಲ್ಲಿ ಸಂವಿಧಾನ ಜಾಗೃತಿ ಜಾಥಾದ ಪೂರ್ವಭಾವಿ ಸಭೆ

(KOLARA): ಬಂಗಾರಪೇಟೆ :ಸಂವಿಧಾನ ಜಾರಿಯಾಗಿ 75 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯವನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ರಶ್ಮಿ ತಿಳಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಇಂದು ಬೆಳಗ್ಗೆ 11 ಗಂಟೆಯಲ್ಲಿ ಸಂವಿಧಾನ ಜಾಗೃತಿ ಜಾಥಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ, ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಅರಿವು ಮೂಡಿಸುವುದು ಹಾಗೂ ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವುದು ಜಾಥಾದ ಉದ್ದೇಶವಾಗಿದೆ. ಸಂವಿಧಾನದ ಪಾಲನೆ ಪ್ರತಿ ನಾಗರಿಕನ ಕರ್ತವ್ಯವಾಗಿದೆ. ಸಂವಿಧಾನದ ಮೌಲ್ಯಗಳನ್ನು ಜೀವಂತವಾಗಿರಿಸಬೇಕೆಂಬ ಉದ್ದೇಶದಿಂದ ಸರ್ಕಾರ ಸಂವಿಧಾನ ಜಾಗೃತಿ ಜಾಥಾ ಹೊರಡಿಸಿದೆ.
ಸಂವಿಧಾನ ಮಹಿಳೆಯರಿಗೆ ವಾಕ್ ಸ್ವಾತಂತ್ರ್ಯ ನೀಡಿ ಬದುಕು ಕಟ್ಟಿಕೊಳ್ಳುವ ಹಕ್ಕು ನೀಡಿದೆ. ಆದ್ದರಿಂದ ಮಹಿಳೆಯರು ಹಾಗೂ ನಾವೆಲ್ಲರೂ ಸಂವಿಧಾನದ ಹಕ್ಕು ಮರೆಯಬಾರದು. ಅದಕ್ಕಾಗಿ ಬಂಗಾರಪೇಟೆ ತಾಲೂಕಿನ ವ್ಯಾಪ್ತಿಯ ಗ್ರಾಪಂ ಮತ್ತು ಬಂಗಾರಪೇಟೆ ಪಟ್ಟಣಕ್ಕೆ ಫೆಬ್ರವರಿ 15ರಿಂದ 19ರ ವರೆಗೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಲಿದ್ದು ಈ ಜಾಥಾ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜ ಮಕ್ಕಳು, ವಿವಿಧ ಸಂಘ ಸಂಸ್ಥೆಗಳು, ತಾಲೂಕ ಮಟ್ಟದ ಎಲ್ಲ ಅಧಿಕಾರಿಗಳು, ಮಹಿಳೆಯರು, ಎಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸಮುದಾಯದವರು ಸೇರಿದಂತೆ ಸಾರ್ವಜನಿಕರು ಭಾಗವಹಿಸಿ ಜಾಥಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ನಾಯಕರದ ಸೂಲಿಕುಂಟೆ ಆನಂದ್, ಸೂಲಿಕುಂಟೆ ರಮೇಶ್, ಹುಣಸನಹಳ್ಳಿ ವೆಂಕಟೇಶ್, ಎಲ್ಲಪ್ಪ, ರಾಮಪ್ಪ, ಮೊದಲಾದ ಮುಖಂಡರು ಭಾಗವಹಿಸಿದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code