ನ್ಯೂಸ್ಶಿವಮೊಗ್ಗ

ಬಡವರ ಜೇಬಿಗೆ ಕತ್ತರಿ ಹಾಕಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ.

ಬಡವರ ಜೇಬಿಗೆ ಕತ್ತರಿ ಹಾಕಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ.

(SHIVAMOGA): ಸಾಗರ ರಾಜ್ಯದಲ್ಲಿ ಅನುದಾನ ಬಿಡುಗಡೆ ಆಗದೆ ಅಭಿವೃದ್ಧಿ ಕುಂಠಿತವಾಗಿರುವುದರ ನಡುವೆಯೇ ಪೆಟ್ರೋಲ್, ಡೀಸೆಲ್‍ಗಳ ದರವನ್ನೂ ಹೆಚ್ಚಿಸಿ, ಬಡವರ ಪರವಾಗಿದ್ದೇವೆ ಎನ್ನುವ ರಾಜ್ಯ ಸರಕಾರ ದರ ಏರಿಕೆ ಬರೆ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ನಡೆದಿದ್ದ ಪ್ರತಿಭಟನೆಯನ್ನು ತಾಲೂಕು ಕೇಂದ್ರದಲ್ಲೂ ನಡೆಸುತ್ತಿದ್ದೇವೆ ಎಂದು ನಗರ ಘಟಕದ ಅಧ್ಯಕ್ಷ ಗಣೇಶ ಪ್ರಸಾದ್ ಹೇಳಿದರು.


ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೆಲವು ದಿನದ ಹಿಂದೆ ಜಿಲ್ಲಾ ಕೇಂದ್ರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತೈಲ ಬೆಲೆ ಹೆಚ್ಚಳದಿಂದ ಜನಸಾಮಾನ್ಯರ ದೈನಂದಿನ ಬದುಕಿಗೂ  ಹೆಚ್ಚುಬರೆ ಬೀಳುತ್ತಿದ್ದು  ಆಹಾರ ಪದಾರ್ಥಗಳು, ದಿನಬಳಕೆ ವಸ್ತುಗಳ ಬೆಲೆಯೂ ಹೆಚ್ಚಳವಾಗುತ್ತದೆ.  ಜತೆಯಲ್ಲಿ ಸರಕಾರವು ತನ್ನ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿರುವುದಲ್ಲದೆ, ಕೇಂದ್ರದ ಮೇಲೆ ಸುಳ್ಳು ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದರು.


ಪೆಟ್ರೋಲ್ ಬೆಲೆ ಹೆಚ್ಚಿರುವ ರಾಜ್ಯಗಳ ಪಟ್ಟಿಯನ್ನು ತೋರಿಸಿ ಜನರಿಗೆ ವಂಚಿಸುವ ಕೆಲಸದಲ್ಲಿ ತೊಡಗಿದೆ. ಆದರೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ಸೇರಿದಂತೆ ಗುಜರಾತ್, ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಗೋವಾ, ಛತ್ತೀಸ್‍ಗಡಗಳ ಜತೆ ಹೋಲಿಕೆ ಮಾಡುತ್ತಿಲ್ಲ. ಬದಲಾಗಿ ತಮಿಳುನಾಡು, ಆಂದ್ರಪ್ರದೇಶ, ತೆಲಂಗಾಣ, ಹೀಗೆ ಎಲ್ಲಿ ಹೆಚ್ಚಿದೆಯೋ ಅಲ್ಲಿಗೆ ಮಾತ್ರ ಹೋಲಿಕೆ ಮಾಡುತ್ತಿದ್ದಾರೆ. ಇವುಗಳಲ್ಲಿ ಆಂದ್ರ ಹೊರತುಪಡಿಸಿದರೆ ಕಾಂಗ್ರೆಸ್ ನೇತೃತ್ವದ ಸರಕಾರವಿದೆ. ಹೀಗೆ ಸಿದ್ದರಾಮಯ್ಯನವರು ಸಮರ್ಥನೆಯ ಭರದಲ್ಲಿ ತಮ್ಮದೇ ಸರಕಾರವನ್ನು ದೂಷಿಸುತ್ತಿದ್ದಾರೆ. ಮುಖ್ಯವಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇದೆಲ್ಲದಕ್ಕೂ ಮೌನವಾಗಿದ್ದಾರೆ. ಇದರ ಅರ್ಥ ಎನು ಅವರಿಗು ಇದು ಇಸ್ಟ ವಿಲ್ಲ ಅನ್ನೂದು ಅವರ ಮಾತಿನಿಂದಲೆ ಗೊತ್ತಾಗುತ್ತದೆ. ವಿವಿಧ ರೀತಿಯಲ್ಲಿ ದರ ಹೆಚ್ಚಳ ಮಾಡಿರುವ ಜನವಿರೋಧಿ ಸರಕಾರದ ವಿರುದ್ಧ ಹೋರಾಡಲೇ ಬೇಕಾದ್ದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಬಿ.ಹೆಚ್. ರಸ್ತೆಯ ಶಿವಪ್ಪ ನಾಯಕ ವೃತ್ತದಲ್ಲಿ ರಸ್ತೆ ತಡೆದು, ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು. ಗ್ರಾಮಾಂತರ ಅಧ್ಯಕ್ಷ ದೇವೇಂದ್ರಪ್ಪ ಯಲಕುಂದ್ಲಿ, ಬಿಜೆಪಿ ಅಧಿಕಾರದಲ್ಲಿದ್ದಾಗ ಜನರಿಗೆ, ಬಡವರಿಗೆ ತೊಂದರೆಯಾಗುತ್ತದೆ ಎಂದು ಹೋರಾಟ ನಡೆಸಿದ್ದ ಕಾಂಗ್ರೆಸ್‍ನವರು ಈಗ ಮಾಡುತ್ತಿರುವುದೇನು? ಭಾಗ್ಯಗಳಿಂದ ತಮ್ಮ ಸರಕಾರ ಸಮೃದ್ಧವಾಗಿದೆ ಎಂದು ಹೇಳಿದ್ದವರು ಏಕಾಏಕಿ ಬೆಲೆ ಏರಿಕೆ ಮಾಡಿದ್ದೇಕೆ? ಇದನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಹೋರಾಟಕ್ಕೆ ತೀರ್ಮಾನಿಸಲಾಗಿದೆ. ಬೆಲೆ ಏರಿಕೆ ಹಿಂಪಡೆಯುವವರೆಗೂ ಅಭಿಯಾನದಂತೆ ಈ ಹೋರಾಟ ಮಾಡುತ್ತೇವೆ ಎಂದರು.
ಪ್ರಮುಖರಾದ ಪ್ರಸನ್ನ ಕೆರೆಕೈ, ರಮೇಶ ಹಾರೆಗೊಪ್ಪ, ಮಲ್ಲಿಕಾರ್ಜುನ ಹಕ್ರೆ, ಸುವರ್ಣ ಟೀಕಪ್ಪ, ಸುಮಾ, ರೂಪಾ ರಮೇಶ್, ಸಂತೋಷ್, ಸತೀಶ್ ಮೊಗವೀರ ಮೊದಲಾದವರಿದ್ದರು.

Leave a Reply

Your email address will not be published. Required fields are marked *

Scan the code