KSRTC ಬಸ್ ವಿದ್ಯಾರ್ಥಿಗಳಿಗೆ ನಿಲ್ಲಿಸುತ್ತಿಲ್ಲ ಎಂದು ಪ್ರತಿಭಟನೆ.
(HASSANA): ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಉದಯಪುರ ಗ್ರಾಮದಲ್ಲಿ ಕೆ ಎಸ್ ಆರ್ ಟಿ ಸಿ (KSRTC)ಬಸ್ ಗಳು ನಿಲ್ಲಿಸದೆ ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ತೊಂದರೆ ನೀಡಲಾಗುತ್ತಿದೆ. ಎಂದು ಆರೋಪಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ಉದಯಪುರ ಗ್ರಾಮದಲ್ಲಿ ಬಸ್ ಸ್ಟಾಪ್ ನಿರ್ಮಾಣವಾದ ಮೇಲೆ ಸಾರಿಗೆ ಬಸ್ ಗಳು ಗ್ರಾಮದ ಒಳಗೆ ಪ್ರವೇಶ ಮಾಡದೆ. ಹೈವೇ ಮೇಲೆ ಸಂಚಾರ ಮಾಡುತ್ತಿವೆ. ಇದರಿಂದ ಸಾಕಷ್ಟು ಮಂದಿಗೆ ತೊಂದರೆಯಾಗುತ್ತದೆ. ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಕಾಲೇಜು ಮತ್ತು ಸ್ಕೂಲ್ ಗಳಿಗೆ ತೆರಳಾಗುತ್ತಿಲ್ಲವೆಂದು ತಿಳಿಸಿದ್ದಾರೆ. ದಯಮಾಡಿ ಸಾರಿಗೆ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಬೇಕು ಎಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ವರದಿ: ಶಾಮಸುಂದರ್ ಕೆ ಅಣ್ಣೇನಹಳ್ಳಿ