ತಾಲೂಕಿನ ನಡುಂಪಲ್ಲಿ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ
(KOLARA): ಬಂಗಾರಪೇಟೆ: ತಾಲೂಕಿನ ನಡುಪಲ್ಲಿ ಗ್ರಾಮದಲ್ಲಿ ಅಭಿಮಾನಿಗಳಿಂದ ಖ್ಯಾತ ನಟ ದಿವಂಗತ ಪುನೀತ್ ರಾಜಕುಮಾರ್ ಅವರ ಎರಡನೇ ವರ್ಷದ ಪುಣ್ಯ ಪುಣ್ಯ ಸ್ಮರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಭಿಮಾನಿಗಳಿಂದ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆಯನ್ನು ನೆರವೇರಿಸಿ ಸಿಹಿ ಹಂಚಿದರು.
ಅಭಿಮಾನಿ ರಾಜೇಶ್ ಮಾತನಾಡಿ ಕ್ಯಾತ ನಟ ದಿವಂಗತ ಪುನೀತ್ ರಾಜಕುಮಾರ್ ರವರು ಒಬ್ಬ ನಟ ಮಾತ್ರವಲ್ಲದೆ ಸಮಾಜ ಸೇವಾ ಕಾರ್ಯಕ್ರಮಗಳನ್ನು ಮಾಡಿದರಿಂದ ಇಂದಿಗೂ ಎಲ್ಲರ ಮನಸ್ಸಲ್ಲಿ ಉಳಿದಿದ್ದಾರೆ. ಈಗಿನ ಯುವಕರು ಪುನೀತ್ ರಾಜಕುಮಾರ್ ಅವರ ಆದರ್ಶ ತತ್ವಗಳನ್ನು ಪಾಲಿಸಿ ಬಡವರಿಗೆ ನಮ್ಮ ಕೈಯಲ್ಲಾದಷ್ಟು ಸಹಾಯವನ್ನು ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಅಭಿಮಾನಿಗಳಾದ ಎನ್ ಆರ್ ಅಭಿಷೇಕ್, ಎಂ ಚರಣ್ ಸಿಂಹ, ಎಂ ರಾಜು ರೆಡ್ಡಿ, ಸಂತೋಷ್ ವಿ, ಮತ್ತುಎ ಆರ್ ಅಭಿ ರೆಡ್ಡಿ ಇದರು.
ವರದಿ: ವಿಷ್ಣು ಕೋಲಾರ