ರಾಜ್ಯದ 12 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ.
(WEATHER UPDATE): ರಾಜ್ಯದಲ್ಲಿ ಈಗಾಗಲೇ ಮಳೆಯಾಗುತ್ತಿದ್ದು ಕೊಡಗು, ಚಿಕ್ಕಮಗಳೂರು ಭಾಗಗಳಲ್ಲಿ ಮಳೆಯಾಗುತ್ತಿದೆ. ಮಾರ್ಚ್ 22 ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಡಗಿನ ಭಾಗಗಳಲ್ಲಿ ನೆನ್ನೆ ಸಂಜೆ ಬಾರಿ ಮಳೆಯಾಗಿದೆ. ನಾಪೋಕ್ಲು, ಬೊಳ್ಳುಮಾಡುವಿನಲ್ಲಿ ಮಳೆಯಾಗಿದೆ. ಚಿಕ್ಕಮಗಳೂರು ಭಾಗಗಳಲ್ಲಿ ಸಹ ಉತ್ತಮ ಮಳೆಯಾಗಿದ್ದು ಮಾರ್ಚ್ 22 ರಿಂದ ಮೂರು ದಿನಗಳ ಕಾಲ ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಕೋಲಾರ, ಹಾಸನ, ತುಮಕೂರು, ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಮಂಡ್ಯ ಮೈಸೂರು ರಾಮನಗರ ಕೊಡಗು ಸೇರಿದಂತೆ ಇನ್ನೂ ಕೆಲವು ಭಾಗಗಳಲ್ಲಿ ವರುಣ ತಂಪೆರಳಿದ್ದಾನೆ ಎಂದು ಸೂಚನೆ ಇದೆ. ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಕೆಲವು ಕಡೆ ಮಳೆ ನಿರೀಕ್ಷಿಸಲಾಗಿದೆ.