ಸಮುದ್ರ ಪಾಲಾಗಿದ್ದ ವಿದ್ಯಾರ್ಥಿನಿಯರ ಕುಟುಂಬಕ್ಕೆ ಜಿಲ್ಲಾಡಳಿತದ ಮೂಲಕ ಪರಿಹಾರ
(KOLARA): ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ರು 46 ಶಾಲಾ ವಿದ್ಯಾರ್ಥಿಗಳು, 6 ಶಿಕ್ಷಕರು ಸೇರಿದಂತೆ ಒಟ್ಟು 57 ಜನರು ಬಸ್ನಲ್ಲಿ ಪ್ರವಾಸಕ್ಕೆ ತೆರಳಿದ್ದರು . ಸಂಜೆ ವೇಳೆ ಸಮುದ್ರ ನೀರಿನಲ್ಲಿ ಈಜುವಾಗ 4ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದರು.
ಪ್ರಸ್ತುತ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ 4 ವಿದ್ಯಾರ್ಥಿಗಳ ಮೃತದೇಹ ಪತ್ತೆ ಹಚ್ಚಲಾಗಿದ್ದು, ಇಂದು ವಿದ್ಯಾರ್ಥಿನಿಯರ ಪಾರ್ಥಿವ ಶರೀರಗಳನ್ನು ಕೋಲಾರ ಜಿಲ್ಲಾಡಳಿತ ಭವನದ ಬಳಿ ಮಾನ್ಯ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ. ನಿಖಿಲ್ ಅಂತಿಮ ನಮನ ಸಲ್ಲಿಸಿ ಭಾವುಕಾರಾಗಿ ಅವರವರ ಊರಿಗೆ ಬೀಳ್ಕೊಟ್ಟರು.
ಮೃತರ ಕುಟುಂಬಕ್ಕೆ ಸಾಂತ್ವನ ಸೂಚಿಸಿದ ಜಿಲ್ಲಾಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಪ್ರಾಂಶುಪಾಲೆ ಯನ್ನು ಅಮಾನತ್ತು ಮಾಡಲಾಗಿದೆ. ಉಳಿದ ಅತಿಥಿ ಶಿಕ್ಷಕರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಸರ್ಕಾರವು ಘೋಷಿಸಿದ ತಲಾ 5 ಲಕ್ಷಗಳ ಪರಿಹಾರವು ಈಗಾಗಲೇ ಜಿಲ್ಲಾಧಿಕಾರಿಗಳ ಖಾತೆಗೆ ಜಮೆಯಗಿದ್ದು, ಇಂದು ಚೆಕ್ ಮುಖಾಂತರ ಮೃತ ವಿದ್ಯಾರ್ಥಿಗಳ ಪೋಷಕರಿಗೆ ತಲುಪಿಸಲಾಗುವುದು ಎಂದರು.
ವಸತಿ ಶಿಕ್ಷಣ ಸಂಘಗಳ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಾಂತರಾಜು ಅವರು ಮಾತನಾಡಿ ಮರಣೋತ್ತರ ವರದಿ ಆಧರಿಸಿ ಇಲಾಖಾ ವಿಚಾರಣೆ ನಡೆಸಲಾಗುವದು, ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸಿದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಅವರೊಂದಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪ್ರವೀಣ್ ಪಿ. ಬಾಗೇವಾಡಿ ,ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕಾಂತರಾಜು, ಸಮಾಜಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.
ವರದಿ: ವಿಷ್ಣು ಕೋಲಾರ