News & Updates

ಸಿಸಿ ಕ್ಯಾಮರಾ ಅಳವಡಿಸುವ ಬಗ್ಗೆ ಸರ್ಕಲ್ ಇನ್ಸಪೆಕ್ಟರ್ ಗೆ ಮನವಿ

ಸಿಸಿ ಕ್ಯಾಮರಾ ಅಳವಡಿಸುವ ಬಗ್ಗೆ ಸರ್ಕಲ್ ಇನ್ಸಪೆಕ್ಟರ್ ಗೆ ಮನವಿ

(HASSANA): ಚನ್ನರಾಯಪಟ್ಟಣ ತಾಲ್ಲೂಕು ಗ್ರಾಮಾಂತರ ಠಾಣೆ ಸರ್ಕಲ್ ಗಳಲ್ಲಿ  ಸಿಸಿ ಕ್ಯಾಮರಾ ಅಳವಡಿಸುವ ಬಗ್ಗೆ ಸರ್ಕಲ್ ಇನ್ಸಪೆಕ್ಟರ್ ರವಿ ಅವರಿಗೆ ವರುಣ್ ಚಕ್ರವರ್ತಿ ಮನವಿ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅಪರಾಧ ಪ್ರಕರಣಗಳು ತಡೆಯಲು ಹಾಗೂ ಪತ್ತೆ ಹಚ್ಚಲು ಸಿಸಿ ಕ್ಯಾಮರಾಗಳ ಅವಶ್ಯಕತೆ ಪೊಲೀಸ್ ಇಲಾಖೆಗೆ ಇರುತ್ತದೆ. ಸಿಸಿ ಕ್ಯಾಮೆರಾಗಳು ಇರುವುದರಿಂದ ಸಾರ್ವಜನಿಕರ ವಾಹನಗಳು, ಇತರ ಸಾಮಗ್ರಿಗಳು, ಮನೆ ಕಳ್ಳತನಗಳು ಆಗುವುದನ್ನು ತಡೆಯಬಹುದು ಹಾಗೂ ಅದನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಸುಲಭವಾಗುತ್ತದೆ. ಜೊತೆಗೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಇರುವ ಕೆಲಸದ ಒತ್ತಡವು ಕೂಡ ಕಡಿಮೆ ಮಾಡಬಹುದು.

ಹಾಗಾಗಿ ತಾವುಗಳು ಸ್ಥಳೀಯ ಸಂಸ್ಥೆಗಳಿಗೆ ಚನ್ನರಾಯಪಟ್ಟಣ ಪುರಸಭೆ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಇತರೆ) ಪತ್ರ ಬರೆದು ಪ್ರತಿ ವರ್ಷ ಸ್ಥಳೀಯ ಸಂಸ್ಥೆಗಳಿಗೆ ಬರುವ ಯಾವುದಾದರೂ ಒಂದು ಅನುದಾನದಲ್ಲಿ ಸಿ ಸಿ ಕ್ಯಾಮೆರಾ ಗಳನ್ನು ಖರೀದಿ ಮಾಡಿ ಆ ಪಟ್ಟಣದ ಅಥವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪ್ರತಿಯೊಂದು ಮುಖ್ಯರಸ್ತೆಯಲ್ಲಿ, ಸರ್ಕಲ್ ಗಳಲ್ಲಿ ಅಳವಡಿಸಲು ತಿಳಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.

ಈಗಾಗಲೇ ಸ್ಥಳೀಯ ಸಂಸ್ಥೆಗಳಿಗೆ ಪ್ರತಿವರ್ಷ ಸಾಕಷ್ಟು ಅನುದಾನ ಹಲವು ಯೋಜನೆಗಳಿಂದ ಬರುತ್ತಿದೆ. ಆ ಅನುದಾನವನ್ನು ಕೆಲವೊಮ್ಮೆ ಬಳಕೆ ಮಾಡದೆ ಇರುವುದರಿಂದ ಅದು ಇಲ್ಲಿಯ ಸಾರ್ವಜನಿಕರಿಗೆ ಬಳಕೆಯಾಗದೆ ಸರ್ಕಾರಕ್ಕೆ ಹಿಂದಿರುಗುತ್ತಿದೆ. ಆ ಅನುದಾನವನ್ನು ಈ ಸಿ ಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಲು ಬಳಸಿಕೊಂಡರೆ ಸಾರ್ವಜನಿಕರಿಗೆ ಅನುಕೂಲ ಆಗುವುದರ ಜೊತೆಗೆ ಪೊಲೀಸರಿಗೆ ಕೆಲಸದ ಒತ್ತಡವು ಸಹ ಕಡಿಮೆ ಆಗುತ್ತದೆ.
ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಮಾನವ ಹಕ್ಕು ಆಯೋಗ ಹಾಸನ ಜಿಲ್ಲಾ ಅಧ್ಯಕ್ಷರು ವರುಣ್ ಚಕ್ರವರ್ತಿ ಮತ್ತು ಡಿಎಸ್ಎಸ್ ಸಂಚಲಕರು ಮನೋಜ್ ನಾಯಕ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Scan the code