ನ್ಯೂಸ್ಹಾಸನ

ಸಾಲುಮರದ ತಿಮ್ಮಕ್ಕ , ವೃಕ್ಷಮಾತೆಗೆ ಉಸಿರಾಟದ ಸಮಸ್ಯೆ, ಹಾಸನದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಲುಮರದ ತಿಮ್ಮಕ್ಕ , ವೃಕ್ಷಮಾತೆಗೆ ಉಸಿರಾಟದ ಸಮಸ್ಯೆ, ಹಾಸನದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


(HASSAN): ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರುಕಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಹಾಸನದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶೀಫ್ಟ್ ಮಾಡಲಾಗಿದೆ. ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ವ್ಯತ್ಯಾಸ ಕಂಡಿದೆ. ಉಸಿರಾಟದ ಸಮಸ್ಯೆಯಾಗಿದ್ದರಿಂದ ಅವರನ್ನು ಹಾಸನದಿಂದ ಕರೆದುಕೊಂಡು ಬಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರ ಆರೋಗ್ಯದಲ್ಲಿ ಸಣ್ಣ ಚೇತರಿಕೆ ಕಂದಿದೆ. ಈ ಬಗ್ಗೆ ತಿಮ್ಮಕ್ಕ ದತ್ತು ಪುತ್ರ ಬಳ್ಳೂರು ಉಮೇಶ್ ಮಾಹಿತಿ ನೀಡಿದ್ದಾರೆ. ಬೇಲೂರು ಮಲೆನಾಡು ಪ್ರದೇಶ ಆಗಿರುವುದರಿಂದ ಶೀತ ಜಾಸ್ತಿಯಾಗಿದೆ. ಕಳೆದ ಮೂರು ದಿನಗಳಿಂದ ಸ್ವಲ್ಪ ಉಸಿರಾಟದ ಸಮಸ್ಯೆಯಾಗಿತ್ತು. ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕವೂ ಕಡಿಮೆಯಾಗಿರಲಿಲ್ಲ ನಿನ್ನೆ ಉಸಿರಾಟದ ಸಮಸ್ಯೆ ಹೆಚ್ಚಳ ಹಿನ್ನೆಲೆ ಬೆಂಗಳೂರಿಗೆ ಕರೆತಂದಿದ್ದೇವೆ.

ಜಾಹೀರಾತು/Advertisement

ಡಾ.ರವೀಂದ್ರ ಮೆಹ್ತಾ ತಂಡ ಸಾಲುಮರದ ತಿಮ್ಮಕ್ಕರಿಗೆ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಸ್ಪಷ್ಟಪಡಿಸಿದರು.ಇತ್ತೀಚೆಗಷ್ಟೇ ತಿಮ್ಮಕ್ಕ ಬೆಂಗಳೂರಿನ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿತ್ತು. ಹಾಗಾಗಿ ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸಾಲುಮರದ ತಿಮ್ಮಕ್ಕ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಳ್ಳೂರಿನರುವ ನಿವಾಸದಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದರು. ಆ ಸಂದರ್ಭದಲ್ಲಿ ಸಹ ಮೈ ಕೈ ನೋವು ಹಾಗೂ ಸುಸ್ತು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಬೇಲೂರು ತಾಲೂಕು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದರು. ಅಲ್ಲದೇ ತಿಮ್ಮಕ್ಕ ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲು ಹಾಸನ ಜಿಲ್ಲಾಡಳಿತ ಇಬ್ಬರು ನರ್ಸ್ಗಳನ್ನು ನಿಯೋಜನೆ ಮಾಡಿತ್ತು. ಆದ್ರೆ, ತಿಮ್ಮಕ್ಕ ಅವರಿಗೆ ಉಸಿರಾಟದ ಸಮಸ್ಯೆಯಾಗಿದ್ದರಿಂದ ಬಳ್ಳೂರಿನ ನಿವಾಸದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವನಿಸಲಾಗಿದೆ.

Leave a Reply

Your email address will not be published. Required fields are marked *

Scan the code