ಬೂದಿಕೋಟೆಯ ಎಸ್ ಆರ್ ವಿ ಎಸ್ ಶಾಲೆಯಲ್ಲಿ ವಿಜ್ಞಾನ ಮತ್ತು ಗಣಿತ ವಸ್ತು ಪ್ರದರ್ಶನ ಕಾರ್ಯಕ್ರಮ
(KOLARA): ಬಂಗಾರಪೇಟೆ : ಗಡಿ ಭಾಗದ ಶಾಲೆಯಲ್ಲಿ ವಿಜ್ಞಾನ ಹಾಗೂ ಇತರ ಮಾದರಿಯ ವಸ್ತು ಪ್ರದರ್ಶನ ಗಳನ್ನು ಏರ್ಪಡಿಸುವುದರಿಂದ ಮಕ್ಕಳ ಜ್ಞಾನಾಭಿವೃದ್ಧಿ ಮಟ್ಟ ಹೆಚ್ಚುತ್ತದೆ ಎಂದು ಬೂದಿಕೋಟೆಯ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮಂಜುನಾಥ್ ತಿಳಿಸಿದರು.
ತಾಲೂಕಿನ ಬೂದಿಕೋಟೆಯ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯ ಶಾಲೆಯಲ್ಲಿ ವಿಜ್ಞಾನ ಮತ್ತು ಗಣಿತ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು,ಈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ,ಪ್ರತಿ ವರ್ಷ ಈ ರೀತಿ ವಿಶೇಷ ಕಾರ್ಯಕ್ರಮಗಳನ್ನು ಈ ಶಾಲೆಯಲ್ಲಿ ಮಾಡುತ್ತಾ ಬರುತ್ತಿದ್ದಾರೆ.ಅದೇ ರೀತಿ ಈ ವರ್ಷವೂ ಸಹ ಹೆಚ್ಚು ಉತ್ಸಾಹದಿಂದ ವಿಶೇಷ ರೀತಿ ಕಾರ್ಯಕ್ರಮವನ್ನು ಮಾಡಲಾಗಿದೆ. ಬೂದಿಕೋಟೆ ಹೋಬಳಿಯ ಗಡಿಭಾಗದಲ್ಲಿ ಯಾವುದೇ ರೀತಿ ಖಾಸಗಿ ಶಾಲೆ ಇರಲಿಲ್ಲ,ಸಂಸ್ಥಾಪಕರಾದ ನಾರಾಯಣಶೆಟ್ಟಿ ರವರು ಈ ಒಂದು ಭಾಗದಲ್ಲಿ ಖಾಸಗಿ ಶಾಲೆಯನ್ನು ತೆರೆದು ಅನೇಕ ಮಕ್ಕಳಿಗೆ ವಿದ್ಯಾಭ್ಯಾಸವನ್ನು ನೀಡಿ ಉತ್ತಮ ಭವಿಷ್ಯವನ್ನು ರೂಪಿಸಿದ್ದಾರೆ ಎಂದು ಹೇಳಿದರು.
ಅದೇ ರೀತಿ ಇಂದು ಮಕ್ಕಳು ಸಿಟಿ ಮಕ್ಕಳಿಗಿಂತ ನಾವೇನು ಕಡಿಮೆ ಇಲ್ಲ ಎಂಬುವ ರೀತಿ ಇದು ವಿವಿಧ ರೀತಿ ಸುಸ್ಥಿರ ಕೃಷಿ ಪದ್ಧತಿ, ಸ್ವಚ್ಛತೆ ಮತ್ತು ಆರೋಗ್ಯ, ಸಂಪನ್ಮೂಲ ನಿರ್ವಹಣೆ, ಕೈಗಾರಿಕಾ ಅಭಿವೃದ್ಧಿ, ಶೈಕ್ಷಣಿಕ ಆಟಿಕೆ ಮತ್ತು ಗಣತಿ ಮಾದರಿ ಹೀಗೆ ಹಲವಾರು ಪರಿಸರ ಸಂರಕ್ಷಣೆ ಜತೆಗೆ ಲಭ್ಯವಿರುವ ವಿಜ್ಞಾನ ಮತ್ತು ತಂತ್ರಜ್ಞಾನದ ಸಹಾಯದಿಂದ ಹೇಗೆ ಅಭಿವೃದ್ಧಿ ಕಾರ್ಯ ನಡೆಸಬಹುದು ಎಂಬುದನ್ನು ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತಿಳಿಸುಕೊಟ್ಟಿದ್ದಾರೆ ಎಂದು ಹೇಳಿದರು .
ರಾಮಕೃಷ್ಣ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕರಾದ ನರೇಶ್ ಮಾತನಾಡಿ,ಪ್ರತಿ ವರ್ಷದಂತೆ ನಮ್ಮ ಶಾಲೆಯಲ್ಲಿ ವಿವಿಧ ವಿಷಯಗಳ ಬಗ್ಗೆ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಇಂಥ ವಸ್ತು ಪ್ರದರ್ಶನ ಮಕ್ಕಳ ಶೈಕ್ಷ ಣಿಕ ಬೆಳವಣಿಗೆಗೆ ಪೂರಕವಾಗುತ್ತದೆ.ಮಕ್ಕಳು ಕೇವಲ ಪುಸ್ತಕದ ಹುಳುಗಳಾದರೆ ಪ್ರಯೋಜನ ವಿಲ್ಲ.ಜ್ಞಾನಕ್ಕೂ ವಿಸ್ತರಿಸಿದಾಗ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರಬರುತ್ತದೆ.
ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ, ಆದರಿಂದ ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ಗಣಿತ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಮಕೃಷ್ಣ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮಹೇಶ್, ಕಾರ್ಯದರ್ಶಿ ಕಲೈವಾಣಿ,ಕೀರ್ತಿ ಪ್ರಾಂಶುಪಾಲರದ ರಾಜ್ ಕುಮಾರ್, ಮುಖಂಡರಾದ ಚಂದ್ರಶೇಖರ್, ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ