ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕ, ಪ್ರಾಂಶುಪಾಲ ಸತೀಶ್.
(KOLARA): ಬಂಗಾರಪೇಟೆ:ಮಕ್ಕಳಾ ಸರ್ವಾಂಗಿಣ ಅಭಿವೃದ್ದಿಗೆ ನಮ್ಮ ಶಾಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ಮು ಹಮ್ಮಿಕೊಳ್ಳುತ್ತೇವೆ ಎಂದು ಶಾಲೆಯ ಪ್ರಾಂಶುಪಾಲರಾದ ಸತೀಶ್ ಹೇಳಿದರು.
ಪಟ್ಟಣದ ಜ್ಯೋತಿ ಪಬ್ಲಿಕ್ ಶಾಲೆಯಲ್ಲಿ ಶಾಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು,
ಶಾಲೆಯ ಪ್ರಾಂಶುಪಾಲರಾದ ಸತೀಶ್ ವಿಜ್ಞಾನ ವಸ್ತು ಪ್ರದರ್ಶನದ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ನಂತರ ಮಾತನಾಡಿ,ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ, ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷರಾಭ್ಯಾಸ ಇದ್ದರೆ ಸಾಕಾಗಾದು, ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕವಾಗುತ್ತದೆ.
ಈ ನಿಟ್ಟಿನಲ್ಲಿ ಆಯೋಜಿಸಿದ್ದ ನಮ್ಮ ಶಾಲೆಯಲ್ಲಿ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಮೂಡಿಸಲು ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗ ದರ್ಶನ ಪಡೆದು ವಿಜ್ಞಾನಕ್ಕೆ ಸಂಬಂಧಿಸಿದ ಪರಮಾಣುಗಳ ರಚನೆ, ವಿದ್ಯುತ್ಕಾಂತೀಯ ಕ್ರೇನ್, ಪರಿಸರ ಮಾಲಿನ್ಯ ನಿಯಂತ್ರಣ, ರಕ್ತ ಶುದ್ಧೀಕರಣ, ಸ್ವಯಂ ಚಾಲಿತ ಗಡಿ ಕಾಯುವ ಯಂತ್ರ, ನೀರಿನ ಮಟ್ಟ ಸೂಚಕ, ಸ್ವಯಂ ಚಾಲಿತ ಹನಿ ನೀರಾವರಿ ಪದ್ಧತಿ ಸೇರಿದಂತೆ ನಾನಾ ಬಗೆಯ ಮಾದರಿ ಪ್ರದರ್ಶನ ಆಕರ್ಷಕವಾಗಿತ್ತು. ವಸ್ತು ಪ್ರದರ್ಶನದಲ್ಲಿ ಮಕ್ಕಳು ಉತ್ತಮ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಇಂಥ ವಸ್ತು ಪ್ರದರ್ಶನ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗುತ್ತದೆ. ಮಕ್ಕಳು ಕೇವಲ ಪುಸ್ತಕದ ಹುಳುಗಳಾದರೆ ಪ್ರಯೋಜನವಿಲ್ಲ. ಜ್ಞಾನಕ್ಕೂ ವಿಸ್ತರಿಸಿದಾಗ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರಬರುತ್ತದೆ ಎಂಬುದಕ್ಕೆ ಈ ವಸ್ತು ಪ್ರದರ್ಶನ ಸಾಕ್ಷಿಯಾಗಿತ್ತು ಎಂದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಹುಮೇರ ತಾಜ್, ಶ್ಯಾಮಲ, ಕವಿತ, ಇನ್ನೂ ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ