ಟೇಬಲ್ ಟೆನಿಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
(SHIVAMOGA): ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಮತ್ತು ಜ್ಞಾನಶ್ರೀ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ಟೇಬಲ್ ಟೆನಿಸ್ ನಲ್ಲಿ ಶಿವಮೊಗ್ಗದ ಸಾಂದೀಪನಿ ಆಂಗ್ಲ ಶಾಲೆಯ ದೈಹಿಕ ಶಿಕ್ಷಕ ಪ್ರಶಾಂತ್ ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಬಾಲಕಿಯರ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
8ನೇ ತರಗತಿಯ ಮನಸ್ವಿನಿ.ಬಿ.ವೈ ಮತ್ತು 9 ತರಗತಿಯ ಬೇಬಿಕಾ ಪಾಟೀಲ್.ಎ.ಸಿ ಇವರುಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಕ್ಟೋಬರ್ ನಲ್ಲಿ ಬೀದರ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಶಿವಮೊಗ್ಗವನ್ನು ಪ್ರತಿನಿಧಿಸಲಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿವಾಸ ವರ್ಮಾ, ಆಡಳಿತ ಮಂಡಳಿ, ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಶುಭಹಾರೈಸಿದ್ದಾರೆ.