ಸೇವಾ ಪಾಕ್ಷಿಕ ಮತ್ತು ಗಾಂಧಿ ಜಯಂತಿ, ಸ್ವಚ್ಛತಾ ಅಭಿಯಾನ.
(SHIVAMOGA): ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಹಾಗೂ ಸೇವಾ ಪಾಕ್ಷಿಕ ಅಂಗವಾಗಿ ದಿನಾಂಕ (02-10-24) ಬಿಜೆಪಿ ಸಾಗರ ನಗರ ಹಾಗೂ ಗ್ರಾಮಾಂತರ ಮಂಡಲ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಾಗರ ನಗರದ ಗಣಪತಿ ಕೆರೆ ಸುತ್ತಮುತ್ತಲಿನ ಭಾಗದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ರಾಜ್ಯ ಉಪಾಧ್ಯಕ್ಷರಾದ ಹೆಚ್. ಹಾಲಪ್ಪನವರು, ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ಗಣೇಶ್ ಪ್ರಸಾದ್ ಕೆ ಆರ್ ಹಾಗೂ ದೇವೇಂದ್ರಪ್ಪ ಯಲಕುಂದ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಹಕ್ರೆ , ಜಿಲ್ಲಾ ವಿಶೇಷ ಅಹ್ವಾನಿತರಾದ ಡಾ. ರಾಜ ನಂದಿನಿ ಕಾಗೋಡು, ಹೊಸನಗರ ಮಂಡಲದ ಪ್ರಭಾರಿಯಾದ ಮಹೇಶ್ ವಿ, ಜಿಲ್ಲಾ ಪ್ರಮುಖರು, ನಗರ ಹಾಗೂ ಗ್ರಾಮಾಂತರ ಮಂಡಲದ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ವಿವಿಧ ಮೋರ್ಚಾದ ಕಾರ್ಯಕರ್ತರು, ವಿವಿಧ ಸ್ಥರದ ಕಾರ್ಯಕರ್ತರು,ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಾಗರ ನಗರದ ಗಣಪತಿ ಕೆರೆಯ ಸ್ವಚ್ಛತಾ ಅಭಿಯಾನದಲ್ಲಿ ಉಪಸ್ಥಿತರಿದ್ದರು.
ವರದಿ: ಸೂರಜ್ ನಾಯರ್