ಸಮಾಜಕ್ಕೆ ಶ್ರೀ ಜಗದ್ಗುರು ರೇಣುಕಾಚಾರ್ಯರು ಅಪಾರ ಕೊಡುಗೆ ನೀಡಿದ್ದಾರೆ, ತಹಶೀಲ್ದಾರ್ ರಶ್ಮಿ
(KOLARA): ಬಂಗಾರಪೇಟೆ : ಸಮಾಜಕ್ಕೆ ಶ್ರೀ ಜಗದ್ಗುರು ರೇಣುಕಾಚಾರ್ಯರು ಅಪಾರ ಕೊಡುಗೆ ನೀಡಿದ್ದಾರೆ, ಪ್ರತಿಯೊಬ್ಬರು ಜೀವನದಲ್ಲಿ ಯಶಸ್ವಿಯಾಗಬೇಕಾದರೆ ಗುರುಹಿರಿಯರ ಮಾರ್ಗದರ್ಶನ ಪಡೆಯಬೇಕು ಎಂದು ತಹಶೀಲ್ದಾರ್ ರಶ್ಮಿ ಹೇಳಿದರು.
ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರಶ್ಮಿ ರವರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,ಪುಷ್ಪಾರ್ಚನೆ ನೆರವೇರಿಸಿ ಮಾತನಾಡುತ್ತಾ, ಲೋಕ ಕಲ್ಯಾಣಕ್ಕಾಗಿ ಶ್ರಮಿಸಿದ ರೇಣುಕಾಚಾರ್ಯರ ಜಯಂತಿ ಅರ್ಥಪೂರ್ಣವಾಗಿ ಆಚರಿಸುವುದರ ಜೊತೆಗೆ ಅವರ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸ್ವಾರ್ಥಕ್ಕಾಗಿ ಬದುಕದೇ ಸಮಾಜಕ್ಕಾಗಿ ಬದುಕಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯ ಅಧಿಕಾರಿ ಮೀನಾಕ್ಷಿ,ಗ್ರಾಮೀಣ ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ಎಂ ಎನ್ ರವೀಂದ್ರ, ಗೌರವಾಧ್ಯಕ್ಷ ಚಂದ್ರಕುಮಾರ್, ಸಹ ಕಾರ್ಯದರ್ಶಿ ಕಿರಣ್, ಪುರೋಹಿತ ಸಂಘದ ಅಧ್ಯಕ್ಷ ರುದ್ರಮರಿ,ಉಪಾಧ್ಯಕ್ಷ ರೇಣುಕಾಚಾರ್ಯ, ಲೋಕೇಶ್,ಮಂಜುನಾಥ, ಸದಾನಂದ, ಪ್ರಭಾಕರ್, ಸುರೇಶ್,ನವೀನ್ ಕುಮಾರ್, ಬಸವಲಿಂಗಪ್ಪ, ನಾಗರಾಜ್, ಶಿವಕುಮಾರ್,ರುದ್ರೇಶ್, ವಿನಯ್, ಶಂಕರಪ್ಪ, ಶಿವಕುಮಾರ್ ಮತ್ತು ಅಕ್ಕಮಹಾದೇವಿ ಸಂಘದ ಚಂಪಕ,ಹಂಸ ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ