ಮೈತ್ರಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರನ್ನು ಗೆಲ್ಲಿಸಲು ಕಾರ್ಯತಂತ್ರಗಳು ಹಾಗೂ ಮುಖಂಡರು ಸಮನ್ವಯ ಸಭೆ.
(SHIVAMOGA): ಸೊರಬ : ಲೋಕಸಭಾ ಚುನಾವಣೆ ಮೈತ್ರಿ ಹಿನ್ನೆಲೆ ಬುಧವಾರ ನಗರದ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಸಮನ್ವಯ ಸಭೆ ನಡೆಸಿದರು.
ಮೈತ್ರಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರನ್ನು ಗೆಲ್ಲಿಸಲು ರೂಪಿಸಬೇಕಾದ ಕಾರ್ಯತಂತ್ರಗಳು, ಪ್ರಚಾರ ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು.
ಬಿಜೆಪಿ ಮುಖಂಡ ಡಿ ಎಸ್. ಅರುಣ್ ಮಾತನಾಡಿ ‘ಜಂಟಿ ಸಭೆಯಲ್ಲಿ ಚುನಾವಣೆ ಎದುರಿಸಲು ಕೈಗೊಳ್ಳಬೇಕಾದ ರೂಪರೇಷೆ, ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಹೇಳಿದರು
ಜೆಡಿಎಸ್ ತಾಲೂಕು ಅಧ್ಯಕ್ಷ ಗಣಪತಿ ಮಾತನಾಡಿ, ‘ಪಕ್ಷದ ವರಿಷ್ಠರ ಸೂಚನೆಯಂತೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರೊಂದಿಗೆ ಸಮನ್ವಯ ಸಭೆ ನಡೆಸಲಾಗಿದೆ. ಕಾರ್ಯಕರ್ತರು ಒಂದುಗೂಡಿ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ’ ಎಂದರು.
ಮೈತ್ರಿ ಧರ್ಮದಂತೆ ಎರಡೂ ಪಕ್ಷಗಳು ಪರಸ್ಪರ ಗೌರವ ಸಮಭಾವದಿಂದ ಕಾಣಬೇಕು. ಲೋಕಸಭೆ ಅಭ್ಯರ್ಥಿ ಗೆಲ್ಲಿಸುವ ಗುರಿ ಹೊಂದಿ ತಾಲ್ಲೂಕು ಮತ್ತು ಬೂತ್ ಮಟ್ಟದಲ್ಲಿ ದೇಶದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲ್ಕೊಪ್ಪ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಸರ್ವ ಸದಸ್ಯರು ಉಪಸ್ಥಿತರಿದ್ದರು
ವರದಿ : ಮಧು ರಾಮ್