ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ ವತಿಯಿಂದ ಬೇಟಿ ಬಚಾವೋ ಬೇಟಿ ಪಢಾವೋ ಬಗ್ಗೆ ಬೀದಿ ನಾಟಕ ಹಾಗೂ ಅರಿವು ಕಾರ್ಯಕ್ರಮ.
(KOLARA): ಬಂಗಾರಪೇಟೆ: ಲಿಂಗಾನುಪಾತದ ಅಂತರವನ್ನು ಕಡಿಮೆ ಮಾಡುವುದು, ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು ಮತ್ತು ಲಿಂಗ ಅಸಮಾನತೆಯನ್ನು ತೆಗೆದುಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ ಜಾರಿ ಮಾಡಿದೆ. ಈ ಮೂಲಕ ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಲು ಮತ್ತು ಸಮಾಜದಲ್ಲಿ ಅವರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಬೀದಿ ನಾಟಕ ಹಾಡುಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ರೂಟ್ಸ್ ಫಾರ್ ಫ್ರೀಡಂ ಟ್ರಸ್ಟ್ ಜಿಲ್ಲಾ ಸಂಚಾಲಕ ರವೀಂದ್ರನಾಥ್ ತಿಳಿಸಿದರು.
ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಯಲ್ಲಿ ಜಿಲ್ಲಾಡಳಿತ & ಜಿಲ್ಲಾ ಪಂಚಾಯತಿ ಕೋಲಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಗಾರಪೇಟೆ ವತಿಯಿಂದ ರೂಟ್ಸ್ ಫಾರ್ ಫ್ರೀಡಂ ಟ್ರಸ್ಟ್ ರವರ ಸಹಯೋಗದೊಂದಿಗೆ ವರ್ಷ ರೂರಲ್ ಡೆವಲಪ್ಮೆಂಟ್ ಅಂಡ್ ಎಜುಕೇಶನ್ ಟ್ರಸ್ಟ್ ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಬೀದಿ ನಾಟಕ ಮತ್ತು ಹಾಡುಗಳ ಮುಖಾಂತರ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ‘ಬೇಟಿ ಬಚಾವೋ ಬೇಟಿ ಪಢಾವೋ’ ಯೋಜನೆಯನ್ನು 2015ರ ಜನವರಿ 22ರಂದು ಹರಿಯಾಣದ ಪಾಣಿಪತ್ನಲ್ಲಿ ಪ್ರಾರಂಭಿಸಲಾಯಿತು. ಹೆಣ್ಣು ಮಕ್ಕಳ ಮೇಲಿನ ತಾರತಮ್ಯವನ್ನು ತೊಡೆದುಹಾಕುವುದು ಮತ್ತು ಅವರ ಬಗ್ಗೆ ಜನರಲ್ಲಿ ನಕಾರಾತ್ಮಕ ಮನೋಭಾವವನ್ನು ಬದಲಾಯಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಗಂಗಹನುಮಯ್ಯ, ಚಂದ್ರಪ್ಪ, ಕ್ರಿಷ್ಣಪ್ಪ, ಮಂಜುನಾಥ್, ಪ್ರಕಾಶ್, ನರಸಿಂಹಮೂರ್ತಿ, ಶ್ರೀನಿವಾಸ ಮಹಿಳಾ ಸಂಚಾಲಕಿ ಸುಮಿತ್ರಾ, ಲಕ್ಷ್ಮೀ ಭಾಗವಹಿಸಿದ್ದರು.
ವರದಿ: ವಿಷ್ಣು ಕೋಲಾರ