ವಿದ್ಯಾರ್ಥಿಗಳು ಕೇವಲ ಪಠ್ಯಕ್ಕಷ್ಟೇ ಸೀಮಿತರಾಗಬಾರದು. ತಮ್ಮಲ್ಲಿ ಅಡಗಿರುವ ವಿಭಿನ್ನ ಪ್ರತಿಭೆಗಳನ್ನು ಹೊರಹಾಕಬೇಕು.
(KOLARA): ಬಂಗಾರಪೇಟೆ :ವಿದ್ಯಾರ್ಥಿಗಳು ಕೇವಲ ಪಠ್ಯಕ್ಕಷ್ಟೇ ಸೀಮಿತರಾಗಬಾರದು. ತಮ್ಮಲ್ಲಿ ಅಡಗಿರುವ ವಿಭಿನ್ನವಾದ ಜ್ಞಾನ, ಕೌಶಲ್ಯ ಹೊರಜಗತ್ತಿಗೆ ತೋರಿಸಲು ಪ್ರತಿಭಾ ಕಾರಂಜಿ ಉತ್ತಮವಾದ ವೇದಿಕೆಯಾಗಿದೆ ಎಂದು ಶಾಸಕ ಎಸ್.ಎನ್ ನಾರಾಯಣಸ್ವಾಮಿ ತಿಳಿಸಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ 2024-25 ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸಹಪಠ್ಯಗಳಲ್ಲಿ ಆಸಕ್ತಿಯಿಂದ ಭಾಗವಹಿಸಬೇಕು ಅಭಿನಯ,ಸಂಗೀತ,ನಾಟಕ,ಸೇರಿದಂತೆ ತಮ್ಮ ಎಲ್ಲ ಕಲೆ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ.ಇದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಡಗೊಳ್ಳಲಿದೆ ಎಂದರು.
ನನ್ನ ತಾಲೂಕಿನ ಮಕ್ಕಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ.ಆದರೆ ಅವರನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿದರೆ ನಮ್ಮ ಮಕ್ಕಳು ಉತ್ತಮ ಸಾಧಕರಾಗಿ ಹೊರಹೊಮ್ಮಲ್ಲಿದ್ದಾರೆ. ಪೋಷಕರು ಹಾಗೂ ಶಿಕ್ಷಕರು ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ಮುಖ್ಯ ಕರ್ತವ್ಯ ಆಗಬೇಕು.ಶಾಲಾ ಹಂತದಿಂದಲೇ
ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸುವ ಕೆಲಸ ನಡೆಯಬೇಕು ಎಂದುರು.ಇಂದು ಅನೇಕ ಮಕ್ಕಳು ನಾನಾ ರೀತಿಯ ವೇಷಭೂಷಣಗಳನ್ನು ಹಾಕಿಕೊಂಡು ತಮ್ಮ ಕಲೆಯನ್ನು ಪ್ರದರ್ಶಿಸಲು ಬಂದಿದ್ದಾರೆ.ಎಲ್ಲಾ ಮಕ್ಕಳಿಗೂ ಶುಭವಾಗಲಿ ಎಂದು ಹಾರೈಸಿದರು.
ಇಲ್ಲಿ ಆಯ್ಕೆಯಾಗಿ ಜಿಲ್ಲಾ ಮಟ್ಟಕ್ಕೆ ಹೋಗುವ ಎಲ್ಲಾ ವಿದ್ಯಾರ್ಥಿಗಳ ಖರ್ಚು ವೆಚ್ಚಗಳನ್ನು ಸಂಪೂರ್ಣವಾಗಿ ನಾನೇ ಬರೆಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಗೋವಿಂದ, ಸದಸ್ಯರಾದ ಪ್ರಶಾಂತ್, ಪುರಸಭೆಯ ಮುಖ್ಯ ಅಧಿಕಾರಿ ಸತ್ಯನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಮೂರ್ತಿ, ಸಮನ್ವಯ ಅಧಿಕಾರಿ ಶಶಿಕಲಾ, ಅಪ್ಪಯ್ಯ ಗೌಡ,ಸುಜಾತಾ, ಕಾಂತರಾಜ್,ಎಲ್ ರಾಮಕೃಷ್ಣಪ್ಪ, ಸುಬ್ರಮಣಿ,ಶಂಕರಪ್ಪ, ರಾಜಪ್ಪ, ಆಂಜನೇಯ ಗೌಡ, ಅಂಜಲಿದೇವಿ ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ