ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ.
(KOLARA): ಬಂಗಾರಪೇಟೆ: ರಾಜ್ಯ ಸರ್ಕಾರಿ ನೌಕರರ ಸಂಘದ 2024- 2029ನೇ ಅವಧಿಗೆ ತಾಲ್ಲೂಕು ಶಾಖೆಯಿಂದ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಆರೋಗ್ಯ ಇಲಾಖೆಯಿಂದ ರವಿಕುಮಾರ್, ಶಿಕ್ಷಣ ಇಲಾಖೆಯಿಂದ ಖಜಾಂಚಿ ಸ್ಥಾನಕ್ಕೆ ವೆಂಕಟೇಶ್, ಶಿಕ್ಷಣ ಇಲಾಖೆಯಿಂದ ರಾಜ್ಯ ಪರಿಷತ್ ಸ್ಥಾನಕ್ಕೆ ಅಪ್ಪಯ್ಯ ಗೌಡ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾ ಅಧಿಕಾರಿ ಮಂಜುನಾಥಚಾರಿ ರವರು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆಂಜನೇಯ ಗೌಡ, ಹೆಚ್ ವಿ ಎನ್ ನಾರಾಯಣಸ್ವಾಮಿ, ಶಂಕರಪ್ಪ, ಸಂಜೀವಪ್ಪ, ಶ್ಯಾಮ್ ಮೂರ್ತಿ, ಪ್ರೇಮಲತಾ, ನಾರಾಯಣಸ್ವಾಮಿ, ಮುನಿನಾರಾಯಣ,ಕಾಂತರಾಜ್ ಹಾಗೂ ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ