ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು, ಮನವಿ ಪತ್ರ ಸಲ್ಲಿಕೆ.
(KOLARA): ಬಂಗಾರಪೇಟೆ:ತಾಲ್ಲೂಕಿನ ಬೂದಿಕೋಟೆ ಕೇಂದ್ರ ಸ್ಥಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಅಂಜಲಿದೇವಿರವರಿಗೆ ಮನವಿ ಪತ್ರ ನೀಡಿದರು. ಈ ವೇಳೆ ಮಾತನಾಡಿದ ಮುಖಂಡರು, ಬೂದಿಕೋಟೆ ಹೋಬಳಿಯು ತಾಲ್ಲೂಕಿನ ಗಡಿ ಹೋಬಳಿಯಾಗಿದ್ದು, ತಮಿಳುನಾಡು ಗಡಿಗೆ ಹೊಂದಿಕೊಂಡಿದ್ದು ತೀರಾ ಹಿಂದುಳಿದ ಹೋಬಳಿಯಾಗಿರುತ್ತದೆ.
ಹೋಬಳಿಯ ಗ್ರಾಮಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದಿಳಿದ ವರ್ಗಗಳ ಜನ ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಬಹಳ ಹಿಂದುಳಿದಿರುತ್ತಾರೆ. ಆದ್ದರಿಂದ ಬೂದಿಕೋಟೆ ಹೋಬಳಿ ಕೇಂದ್ರ ಸ್ಥಾನವಾದ ಬೂದಿಕೋಟೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಿಕೊಟ್ಟರೆ ಹೋಬಳಿಯಲ್ಲಿ ವಾಸ ಇರುವ ಪರಿಶಿಷ್ಟ ಜಾತಿ, ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ಜನ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ತುಂಬಾ ಅನುಕೂಲವಾಗಲಿದೆ. ಜೊತೆಗೆ ಬೂದಿಕೋಟೆ ಹೋಬಳಿ ಭಾಗದ ದಲಿತರು ಸಾಂಸ್ಕೃತಿಕ, ಶೈಕ್ಷಣಿಕಕ್ಕೆ ಸಂಬಂಧಿಸಿದಂತೆ ಮುಂದುವರೆಯಲು ಹಾಗೂ ವಿಚಾರ ಸಂಕಿರಣಗಳು ಮತ್ತು ಸಭೆ-ಸಮಾರಂಭಗಳನ್ನು ನಡೆಸಿಕೊಳ್ಳಲು ತುಂಬಾ ಅನುಕೂಲವಾಗಲಿದೆ ಎಂಬ ಅಂಶವನ್ನು ಪರಿಗಣಿಸಿ ಬೂದಿಕೋಟೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಿಕೊಡಲು ಸಮಿತಿವತಿಯಿಂದ ಮನವಿ ಮಾಡುತ್ತಿದ್ದೇವೆ ಎಂದರು.
ಈ ವೇಳೆ ಸಂಘಟನೆಯ ಹಿರಿಯ ಮುಖಂಡರಾದ ಹೂವರಸನಹಳ್ಳಿ ರಾಜಪ್ಪ, ತಾಲೂಕು ಸಂಚಾಲಕರಾದ ಹಿರೇಕರಪ್ಪನಹಳ್ಳಿ ರಾಮಪ್ಪ ಸಂಘಟನಾ ಸಂಚಾಲಕರುಗಳಾದ ಸಿದ್ದನಹಳ್ಳಿ ಯಲ್ಲಯ್ಯ, ಮಾರುತಿ ಪ್ರಸಾದ್ ಎಂ, ಬೂದಿಕೋಟೆ ಮಧುಸೂದನ್, ತಾಲೂಕು ಮಹಿಳಾ ಒಕ್ಕೂಟದ ಸಂಚಾಲಕರಾದ ನಾರಾಯಣಪುರ ಕವಿತಾ ಸಂಘಟನಾ ಸಂಚಾಲಕರುಗಳಾದ ಬಂಗಾರಪೇಟೆ ವಿಜಯಲಕ್ಷ್ಮಿ, ಕತ್ತಿಹಳ್ಳಿ ಪ್ರತಿಭಾ ಖಜಾಂಚಿ ಭಾವರಹಳ್ಳಿ ಸುಕನ್ಯ, ಮುಖಂಡರಾದ ಕೆ ರಾಮಮೂರ್ತಿ, ದೇವಗಾನಹಳ್ಳಿ ವೆಂಕಟೇಶ, ಬೊಯನಹಳ್ಳಿ ವೆಂಕಟಪತಿ, ಬಂಗಾರಪೇಟೆ ಅಶ್ವಿನಿ, ಹುಕ್ಕುಂದ ಮಂಜುನಾಥ್, ಆಲಂಬಾಡಿ ಮುನಿಯಪ್ಪ, ಬುವನಹಳ್ಳಿ ಚಲಪತಿ, ಬೂದಿಕೋಟೆ ಬಾಬು ಮೊದಲಾದವರಿದ್ದರು.
ವರದಿ: ವಿಷ್ಣು ಕೋಲಾರ