ಕೋಲಾರನ್ಯೂಸ್

ಎಚ್‌ಐವಿ ಸೋಂಕಿತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಸೋಂಕು ಇತರರಿಗೆ ಹರಡದಂತೆ ತಡೆಯಲು ಜನಜಾಗೃತಿ

ಎಚ್‌ಐವಿ ಸೋಂಕಿತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಸೋಂಕು ಇತರರಿಗೆ ಹರಡದಂತೆ ತಡೆಯಲು ಜನಜಾಗೃತಿ

(KOLARA):ಬಂಗಾರಪೇಟೆ: ಎಚ್‌ಐವಿ ಸೋಂಕಿತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಸೋಂಕು ಇತರರಿಗೆ ಹರಡದಂತೆ ತಡೆಯಲು ಜನಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಅಪರ ನ್ಯಾಯಾಧೀಶರದ ಅಜಿತ್ ದೇವರಮನಿ ಹೇಳಿದರು. 

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ , ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ವಕೀಲರ ಸಂಘ, ಹಾಗೂ ವಿವಿಧ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಏಡ್ಸ್ ದಿನಾಚರಣೆಯ ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು,ಸಮಾಜದಲ್ಲಿ ಎಚ್‌ಐವಿ ಸೋಂಕಿತರಿಗೂ ಎಲ್ಲರಂತೆ ಬದುಕುವ ಹಕ್ಕಿದೆ. ಸೋಂಕಿತರನ್ನು ಸಮಾನತೆಯಿಂದ ನೊಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಮುಂದಿನ ದಿನಗಳಲ್ಲಿ ಏಡ್ಸ್ ಇತರರಿಗೆ ಹರಡದಂತೆ ತಡೆಯುವುದು ಅತ್ಯಾವಶ್ಯಕ. ಈ ನಿಟ್ಟಿನಲ್ಲಿ ಎಲ್ಲರೂ ಸೋಂಕು ತಡೆಗೆ ಮುಂದಾಗಬೇಕು’ ಎಂದು ತಿಳಿಸಿದರು.



ಸೋಂಕಿನ ಬಗ್ಗೆ ಅರಿವು ಮೂಡಿಸಲು ವಿಶ್ವ ಏಡ್ಸ್ ದಿನ ಆಚರಣೆಯನ್ನು 1988ರಿಂದ ಈವರೆಗೂ ಸತತವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಏಡ್ಸ್ ದಿನದ ಮಹತ್ವವನ್ನು ಪ್ರತಿಯೊಬ್ಬರು ಅರಿಯಬೇಕು. ನಮ್ಮ ದೇಶದಲ್ಲಿ ಏಡ್ಸ್‌ನಿಂದ ಮುಕ್ತಗೊಳಿಸಲು ಎಲ್ಲರು ಪಣತೊಡಬೇಕು’ ಎಂದು ಕರೆ ನೀಡಿದರು. 

ತಾಲೂಕಿನ ಟಿ ಎಚ್ ಓ ಪ್ರಿಯದರ್ಶಿನಿ ಮಾತನಾಡಿ, ‘1981ರಲ್ಲಿ ಪ್ರಪಂಚದಲ್ಲಿ ಏಡ್ಸ್ ವೈರಸ್ ಪತ್ತೆಯಾಯಿತು. 1983ರಲ್ಲಿ ದೇಶದಲ್ಲಿ ಮೊದಲ ಬಾರಿಗೆ ಸೋಂಕು ಕಂಡು ಬಂತು. ಅಸುರಕ್ಷಿತ ಲೈಂಗಿಕತೆ, ಉಪಯೋಗಿಸಿ ಸಂಸ್ಕರಿಸದ ಸೂಜಿಯಿಂದ, ತಾಯಿಯಿಂದ ಮಗುವಿಗೆ, ಪರೀಕ್ಷೆ ಮಾಡಿಸಿಲ್ಲದ ರಕ್ತದಾನಿಗಳಿಂದ ಸೋಂಕು ಹರಡುವ ಸಂಭವ ಹೆಚ್ಚಾಗಿದೆ. ಏಡ್ಸ್ ತಡೆಯಲು ಎಲ್ಲರೂ ದೃಢಸಂಕಲ್ಪ ಮಾಡಬೇಕು’ ಎಂದರು.

ಈ ಸಂದರ್ಭದಲ್ಲಿ ಪ್ರಧಾನ ನ್ಯಾಯಾಧೀಶರಾದ ಬಿ.ಕೇಶವಮೂರ್ತಿ ಉಪತಹಶಿಲ್ದಾರ್ ಚಂದ್ರಶೇಖರ್, ಇಓ ರವಿಕುಮಾರ್, ಬಿಇಓ ಸುಕನ್ಯ, ಸಿ ಡಿ ಪಿ ಓ ಮುನಿರಾಜು, ಆರೋಗ್ಯ ಇಲಾಖೆಯ ಅಧಿಕಾರಿ ಭಾರತಿ, ಇನ್ಸ್ಪೆಕ್ಟರ್ ನಂಜಪ್ಪ ಮೊದಲಾದವರು ಭಾಗವಹಿಸಿದ್ದರು.

ವರದಿ ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code