ಶಿಕ್ಷಕರು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು:ಬಿ.ಇ.ಓ, ಈ.ಪರಶುರಾಮಪ್ಪ.
(SHIVAMOGGA): ಸಾಗರ:ನ-28/ ಶಿಕ್ಷಕರು ನಿರಂತರವಾಗಿ ತಮ್ಮನ್ನು ತಾವು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಈ.ಪರಶುರಾಮಪ್ಪ ಹೇಳಿದರು.
ಅವರು ಇಲ್ಲಿನ ಗುರುಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಾಗರ ಇವರು ಆಯೋಜಿಸಿರುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಿಕ್ಷಕರು ತಮ್ಮೊಳಗಿನ ಪ್ರತಿಭೆಯನ್ನು ಹೊರಹಾಕುವ ಕೆಲಸ ಆಗಬೇಕಾಗಿದೆ, ಜೊತೆಗೆ ತಮ್ಮ ಪ್ರತಿಭೆಯನ್ನು ಮಕ್ಕಳಲ್ಲೂ ಬೆಳೆಸಬೇಕಾಗಿದೆ.
ನಿರಂತರ ಪರಿಶ್ರಮದಿಂದ ಗುರಿಯನ್ನು ಮುಟ್ಟಲು ಸಾಧ್ಯವಾಗುತ್ತದೆ ಶಿಕ್ಷಕರು ಸಮುದಾಯ ಹಾಗೂ ಶಿಕ್ಷಕರಿಗೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಬೇಕಾಗಿದೆ ಅದಕ್ಕಾಗಿ ಸೃಜನಶೀಲತೆಯಿಂದ ಕೆಲಸ ಮಾಡಿದಲ್ಲಿ ಪ್ರತಿಯೊಬ್ಬರು ಗುರುತಿಸುತ್ತಾರೆ ತಮ್ಮ ಕಾರ್ಯದ ಜೊತೆಯಲ್ಲಿ ಇಂತಹ ಸಾಂಸ್ಕೃತಿಕ ಮನಸ್ಸನ್ನು ಬೆಳೆಸಿಕೊಂಡಲ್ಲಿ ಮಾನಸಿಕವಾಗಿ ಸದೃಢವಾಗಿರಲು ಸಾಧ್ಯವಾಗುತ್ತದೆ ಇ ಇಲಾಖೆ ಪಠ್ಯಕ್ಕೆ ಮಾತ್ರ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಿಗೂ ಸಹ ವಿಶೇಷ ಆದ್ಯತೆಯನ್ನು ನೀಡುತ್ತಿದ್ದು ಮಕ್ಕಳಿಗೆ ಹಾಗೂ ಶಿಕ್ಷಕರಲ್ಲೂ ಸಹ ಪ್ರತಿಭೆಗಳನ್ನು ಗುರುತಿಸುವಂತಹ ಕೆಲಸ ನಡೆಯುತ್ತಿದೆ ಎಂದವರು ಹೇಳಿದರು ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಹಾಬಲೇಶ್ ಅವರು ಮಾತನಾಡಿ ಸದಾ ಚಟುವಟಿಕೆ ಎಂದಿರುವ ಶಿಕ್ಷಕ ಮಕ್ಕಳಿಗೆ ಸ್ಪೂರ್ತಿಯಾಗಬಲ್ಲ ಕೇವಲ ಪುಸ್ತಕದ ಹುಳಗಳಾಗಿರದೆ ಸಾಹಿತ್ಯ ಸಾಂಸ್ಕೃತಿಕ ಕ್ರೀಡೆ ಮುಂತಾದ ಮನಸ್ಸನ್ನು ವಿಕಸಿಸುವ ಕಾರ್ಯಗಳಲ್ಲಿ ತೊಡಗಿಸಿ ಕೊಂಡಾಗ ಮಾತ್ರ ಪರಿಣಾಮಕಾರಿಯಾಗಿ ವೃತ್ತಿ ಬದುಕನ್ನು ಯಶಸ್ವಿಯಾಗಿಸಲು ಸಾಧ್ಯವಾಗುತ್ತದೆ ಶಿಕ್ಷಕರನ್ನು ಸಾಕಷ್ಟು ಪ್ರತಿಭವಾಂತರ ಇದ್ದಾರೆ ಅಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿ ಕೊಂಡವರು ಇರುವುದರಿಂದ ಶಿಕ್ಷಣ ಇಲಾಖೆ ಕ್ರಿಯಾಶೀಲವಾಗಿರಲು ಸಾಧ್ಯವಾಗಿದೆ ಇಂತಹ ವೇದಿಕೆಗಳ ಮೂಲಕ ಶಿಕ್ಷಕರ ಪ್ರತಿಭೆಗಳು ಹೊರಬರಲು ಸಾಧ್ಯ ಎಂದವರು ಹೇಳಿದರು.
ಕಾರ್ಯಕ್ರಮದಲ್ಲಿ ಸಮನ್ವಯಾಧಿಕಾರಿ ಡಾ.ಅನ್ನಪೂರ್ಣ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಗನ್ನಾಥ್ ಕೆ. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಲಕ್ಷ್ಮಣ್ ಆರ್. ನಾಯಕ್ ಭಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಭು ಇ.ಎನ್. ಶಿಕ್ಷಕರ ಸಹಕಾರ ಸಂಘ ಅಧ್ಯಕ್ಷ ಮನೋರಪ್ಪ. ಪ್ರಮುಖರಾದ ಎಲ್.ಟಿ.ಗವಿಯಪ್ಪ, ಮೊದಲಾದವರು ಉಪಸ್ಥಿತರಿದ್ದರು.ಭುವನೇಶ್ವರಿ ಭಟ್ ಪ್ರಾರ್ಥಿಸಿ ಗುರುರಾಜ್ ಸ್ವಾಗತಿಸಿ ವಿ.ಟಿ.ಸ್ವಾಮಿ ವಂದಿಸಿ ಸಂತೋಷ್ ನಿರೂಪಿಸಿದರು.
ವರದಿ ರಾಘವೇಂದ್ರ ತಾಳಗುಪ್ಪ