ಕೋಲಾರದೇಶ

ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ತಹಶೀಲ್ದಾರ್ ರಶ್ಮಿ ಚಾಲನೆ.

ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ತಹಶೀಲ್ದಾರ್ ರಶ್ಮಿ ಚಾಲನೆ.


(KOLARA): ಬಂಗಾರಪೇಟೆ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಹಾಗೂ ಸವಲತ್ತುಗಳನ್ನು ಪಡೆಯಲು ಪಟ್ಟಣ ಪ್ರಜೆಗಳು ಕರ್ನಾಟಕ ಒನ್ ಮತ್ತು ಗ್ರಾಮೀಣ ಜನರು ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಅರ್ಜಿ ಸಲ್ಲಿಸಿ ಮೂಲಕ ಸರ್ಕಾರಿ ಸೌಲತ್ತುಗಳನ್ನು ಸದುಪಿಯೋಗ ಪಡಿಸಿಕೊಳ್ಳಬೇಕೆಂದು ತಾಸಿಲ್ದಾರ್ ರಶ್ಮಿ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಹತ್ತಿರ ಐಸಿಐಸಿಐ ಬ್ಯಾಂಕ್ ಪಕ್ಕದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಕರ್ನಾಟಕ ಒನ್ ಸೇವಾ ಕೇಂದ್ರ ಕಚೇರಿಗೆ ಚಾಲನೆ ನೀಡಿ ಮಾತನಾಡಿದ ಅವರು ಕೆಲವು ಖಾಸಗಿ ಸೈಬರ್ ಸೆಂಟರ್ ಗಳಲ್ಲಿ ನಕಲಿ ಐಡಿ ಕ್ರಿಯೇಟ್ ಮಾಡಿ ಸರ್ಕಾರಿ ಸೌಲಭ್ಯಗಳನ್ನು ಮಾಡಿಕೊಡಲಾಗುವುದೆಂದು ಅರ್ಜಿಗಳನ್ನು ಹಾಕುವ ಮೂಲಕ ಹೆಚ್ಚಿನ ರೀತಿಯಲ್ಲಿ ಸಾರ್ವಜನಿಕರಿಂದ ಹಣ ಪಿಕ್ಕುತಿದ್ದು ಇದರ ಬಗ್ಗೆ ಸಾಕಷ್ಟು ದೂರಗಳು ಬಂದಿದ್ದು ಇವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನು ತಪ್ಪಿಸಲು ಜನರು ಹೆಚ್ಚಾಗಿ ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಜನರು ಸೇವಾ ಕೇಂದ್ರಗಳಲ್ಲಿ ಸರ್ಕಾರದ ಯೋಜನೆಗಳಿಗೆ ಅರ್ಜಿ ಹಾಕಬೇಕೆಂದು ಹೇಳಿದರು.


ಈ ಸಂದರ್ಭದಲ್ಲಿ ಜಿಲ್ಲಾ ಕರ್ನಾಟಕ ಒನ್ ಸಂಯೋಜಕರಾದ ಉಷಾರಾಣಿ, ಉಜಯ್ ಎಂಟರ್ಪ್ರೈಸಸ್ ಮಾಲೀಕರಾದ ಕಾಂತಿ ಸಾಗರ್, ಕರ್ನಾಟಕ ಒನ್ ಮಾಲೀಕರಾದ ರಾಜ್ ಕಿಶೋರ್, ರಾಜ್ ಮುರಳಿ ಹಾಜರಿದ್ದರು.

ವರದಿ ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code