ಪಟ್ಟಣದ ಕುವೆಂಪು ವೃತ್ತದಲ್ಲಿ ಕುರುಬರ ಸಂಘದ ವತಿಯಿಂದ ಸಂಗೊಳ್ಳಿ ರಾಯಣ್ಣರವರ 193ನೇ ಹುತಾತ್ಮ ದಿನಾಚರಣೆ
(KOLARA): ಬಂಗಾರಪೇಟೆ:ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದವರಲ್ಲಿ ಒಬ್ಬರಾಗಿದ್ದರು ರಾಯಣ್ಣನ ದೇಶ ಪ್ರೇಮ ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಲ್.ರಾಮಕೃಷ್ಣ ಹೇಳಿದರು.
ಪಟ್ಟಣದ ಕುವೆಂಪು ವೃತ್ತದಲ್ಲಿ ನೆನ್ನೆ ಮಧ್ಯಾಹ್ನ 12 ಗಂಟೆಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣರವರ 193ನೇ ಹುತಾತ್ಮ ದಿನಾಚರಣೆ ಪ್ರಯುಕ್ತ ಅವರ ಭಾವಚಿತ್ರ ವಿಟ್ಟು ಪೂಜೆ ಸಲ್ಲಿಸಿ ಬಳಿಕ ಮಾತನಾಡಿ, ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದ ರಾಯಣ್ಣ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.
ರಾಯಣ್ಣ ಆಗಸ್ಟ್ 15ರಂದು ಜನ್ಮಸಿದರೆ ಜನವರಿ 26ರಂದು ಹುತಾತ್ಮರಾದರು. ರಾಯಣ್ಣ ದೇಶಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಜನವರಿ 26ರಂದು ರಾಯಣ್ಣನ್ನು ಗಲ್ಲಿಗೇರಿಸಿದ ದಿನ ನಿಜವಾದ ಸ್ವಾತಂತ್ರ್ಯ ದಿನವಾಗಿದೆ ಹಾಗೂ ಗಣರಾಜಯೋತ್ಸವ ದಿನವೂ ಹೌದು ಪ್ರಜಾಸತ್ತಾತ್ಮಕ ದಿನ,ಭಾರತೀಯರಿಗೆ ರಾಷ್ಟ್ರೀಯ ಹಬ್ಬ ಇವೆರಡು ದಿನಗಳು ಜನನ ಮರಣದವುಗಳು ರಾಯಣ್ಣನಿಗೆ ಮಾತ್ರವಲ್ಲ ಭಾರತೀಯರಿಗೆ ರಾಷ್ಟ್ರೀಯ ಉತ್ಸವದ ದಿನಗಳಾಗಿವೆ ಎಂದು ಹೇಳಿದರು.
ವರದಿ: ವಿಷ್ಣು ಕೋಲಾರ