ಚಿಕ್ಕಮಗಳೂರುನ್ಯೂಸ್

ಹೇಮಾವತಿ ನದಿಯ ಕಿರು ಕಾಲುವೆಗೆ ಬಿದ್ದು ಕಾರು, ಪ್ರಾಣಾಪಾಯದಿಂದ ಪಾರಾದ ಇಬ್ಬರು.

ಹೇಮಾವತಿ ನದಿಯ ಕಿರು ಕಾಲುವೆಗೆ ಬಿದ್ದು ಕಾರು, ಪ್ರಾಣಾಪಾಯದಿಂದ ಪಾರಾದ ಇಬ್ಬರು.

(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಿಂದ ಬಣಕಲ್ ಹೋಗುವ ರಸ್ತೆಯ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಯ ಕಿರು ಕಾಲುವೆಗೆ ಬಿದ್ದಿದೆ.


ಮಂಗಳೂರು ಮೂಲದ ಕಾರೊಂದು ಮಂಗಳೂರು ಕಡೆಯಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದಾಗ ಮಳೆಗೆ ರಸ್ತೆ ತಿರುವು ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಕೆಳಕ್ಕೆ ಹಳ್ಳಕ್ಕೆ ಬಿದ್ದಿದೆ.
ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಸಮೀಪ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ zನೀರು ನಿಂತು ಇಂತಹ ಘಟನೆ ಸಂಭವಿಸುತ್ತಿದೆ.
ಕಾರಿನಲ್ಲಿ ಇಬ್ಬರೇ ಇದ್ದು ಕಾರು ನೀರಿಗೆ ಜಾರಿರುವುದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

Scan the code