ಹಾಲಿ ಶಾಸಕರು ಶಿಕ್ಷಕರಪರ ವಿಧಾನಪರಷತ್ನಲ್ಲಿ ಒಮ್ಮೆಯೂ ಧ್ವನಿ ಎತ್ತಲಿಲ್ಲ,ಮಾಜಿ ಶಾಸಕಿ ಪೂರ್ಣಿಮಾ
(KOLARA): ಬಂಗಾರಪೇಟೆ:ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ ಅವರ ಪತ್ನಿ ಮಾಜಿ ಶಾಸಕ ಪೂರ್ಣಿಮಾ ರವರು ತಾಲೂಕಿನಲ್ಲಿ ಸಂಚರಿಸಿ ಪತಿ ಪರ ಈ ಬಾರಿ ಚುನಾವಣೆಯಲ್ಲಿ ಮತ ಚಲಾಯಿಸಬೇಕೆಂದು ಮನವಿ ಮಾಡಿದರು.
ಪಟ್ಟಣದಲ್ಲಿ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ನಂತರ ಬೂದಿಕೋಟೆ,ಕಾಮಸಮುದ್ರ,ಸೂಲಿಕುಂಟೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ತೆರಳಿ ಮತಯಾಚಿಸಿ ಮಾತನಾಡುತ್ತಾ ಗ್ರಾಮಗಳಲ್ಲಿ ಶಿಕ್ಷಕರನ್ನು ಭೇಟಿ ಮಾಡಿ ಕಳೆದ ಬಾರಿ ನನ್ನ ಪತಿ ಶ್ರೀನಿವಾಸ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪಮತಗಳಿಂದ ಸೋತರು,ಆದರೆ ಈಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿದ್ದು ಅವರಿಗೆ ಆನೆ ಬಲ ಬಂದಿದೆ.ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಪ್ರತಿನಿಧಿಸಿರುವ ಹಾಲಿ ಶಾಸಕರು ಶಿಕ್ಷಕರ ಪರ ವಿಧಾನಪರಷತ್ನಲ್ಲಿ ಒಮ್ಮೆಯೂ ಧ್ವನಿ ಎತ್ತಲಿಲ್ಲ.ಇದರಿಂದ ಶಿಕ್ಷಕರ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗದೆ ಮೂಲೆಗುಂಪಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನೇ ಚುನಾಯಿಸಿದರೆ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.ಈಗಾಗಲೇ ಎನ್ಪಿಎಸ್ ರದ್ದತಿಗೆ ಮುಖ್ಯಮಂತ್ರಿಗಳು ವಿಶೇಷ ಆಯೋಗ ರಚಿಸಿ ಅದರ ವರದಿ ನಂತರ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.ಇದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪರಿಷತ್ನಲ್ಲಿ ಧ್ವನಿ ಎತ್ತಲು ಆಡಳಿತ ಪಕ್ಷದ ಸದಸ್ಯರಿದ್ದರೆ ಮಾತ್ರ ಅದಕ್ಕೆ ಬೆಲೆ ಸಿಗುವುದು,ನಾವೂ ಸಹ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವುದರಿಂದ ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿದೆ,ಆದ್ದರಿಂದ ಬದಲಾವಣೆಗಾಗಿ ಒಮ್ಮೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ,ಬದಲಾವಣೆಯಾಗದಿದ್ದರೆ ಮತ್ತೆ ನಿಮ್ಮ ಮುಂದೆ ಬರುವುದಿಲ್ಲ ಎಂದು ಹೇಳಿದರಲ್ಲದೆ ಹೋದ ಕಡೆಯಲ್ಲಾ ಶಿಕ್ಷಕರಿಂದ ಉತ್ತಮ ಸ್ಪಂದನೆ ಬರುತ್ತಿರುವುದರಿಂದ ಈ ಬಾರಿ ಕಾಂಗ್ರೆಸ್ ಜಯಭೇರಿ ಬಾರಿಸುವುದು ಖಚಿತ ಎಂದು ವಿಶ್ವಾಸವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮೇಸ್ತ್ರಿ ಶ್ರೀನಿವಾಸ್, ಜಯರಾಮ್, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಶ್ರೀನಿವಾಸ್, ಅಮರ್ ಹಾಗೂ ಶಿಕ್ಷಕರು ಇದ್ದರು.
ವರದಿ: ವಿಷ್ಣು ಕೋಲಾರ