ನ್ಯೂಸ್ಶಿವಮೊಗ್ಗ

ಮನೆ ಒಳಗೆ ಇಟ್ಟಿದ್ದ ಸೌದೆಗೆ ಹತ್ತಿದ ಬೆಂಕಿ ಮೂವರು ಸಜೀವ ದಹನ

ಮನೆ ಒಳಗೆ ಇಟ್ಟಿದ್ದ ಸೌದೆಗೆ ಹತ್ತಿದ ಬೆಂಕಿ ಮೂವರು ಸಜೀವ ದಹನ

(SHIVAMOGA): ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪ ಕೆಕೋಡ್ನಲ್ಲಿ ಅಗ್ನಿ ದುರಂತ ನಡೆದಿದೆ ಒಂದೇ ಕುಟುಂಬದ ಮೂವರು ಸಜೀವದಹನರಾಗಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ ಆಸ್ಪತ್ರೆಗೆ ದಾಖಲಿಸಲಾಗಿದೆ ಮನೆ ಒಳಗೆ ಕೋಣೆ ಮನೆಯ ಕೋಣೆ ಒಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಮೃತ ದುರ್ದೈವಿಗಳು. ಮನೆಯ ಕೋಣೆಯೊಳಗೆ ಸಂಗ್ರಹಿಸಿಟ್ಟಿದ್ದ ಕಟ್ಟಿಗೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನೋರ್ವ ಪುತ್ರ ಭರತ್ (28) ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಮನೆಯಲ್ಲಿ ಬೆಳ್ಳಂ ಬೆಳಗ್ಗೆ ಮೂವರ ಸಜೀವ ದಹನ ಸುದ್ದಿ ಕೇಳಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

Leave a Reply

Your email address will not be published. Required fields are marked *

Scan the code