ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿ ಪಕ್ಷದಲ್ಲಿ ಕಾರ್ಯಚಟುವಟಿಕೆ ನಡೆಯುತ್ತಿದೆ. ನನ್ನ ಸ್ಪರ್ಧೆ ನಿಶ್ಚಿತ ಇದರಲ್ಲಿ ಯಾವುದೇ ಬದಲಾವಣೆ ಇಲ್ಲವೇ ಇಲ್ಲ–ಕೆ.ಎಸ್ ಈಶ್ವರಪ್ಪ
(SHIVAMOGA): ಸೊರಬ:ಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿ ಪಕ್ಷದಲ್ಲಿ ಕಾರ್ಯಚಟುವಟಿಕೆ ನಡೆಯುತ್ತಿದೆ. ಒಂದು ಕುಟುಂಬಕ್ಕೆ ಒಂದು ಹುದ್ದೆ ಎನ್ನುವ ಸಿದ್ಧಾಂತವನ್ನು ಗಾಳಿಗೆ ತೂರಲಾಗಿದೆ. ಆದ್ದರಿಂದ ನನ್ನ ಸ್ಪರ್ಧೆ ನಿಶ್ಚಿತ ಇದರಲ್ಲಿ ಯಾವುದೇ ಬದಲಾವಣೆ ಇಲ್ಲವೇ ಇಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದರು.
ಶನಿವಾರ ಪಟ್ಟಣದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ರಾಷ್ಟ್ರ ಭಕ್ತರ ಬಳಗದ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
ನಾಲ್ಕು ದಶಕಗಳ ಕಾಲ ಪಕ್ಷಕ್ಕಾಗಿ ದುಡಿದಿದ್ದೇನೆ. ವರಿಷ್ಟರ ಎಲ್ಲಾ ಮಾತು, ಸೂಚನೆಗೆ ತಲೆ ಭಾಗಿದ್ದೇನೆ. ಆದರೆ ಅವರಿಂದ ಮಾತ್ರ ಸರಿಯಾದ ಸ್ಪಂದನೆ ಸಿಗಲಿಲ್ಲ. ಇಲ್ಲಿ ಹಿಂದೂ ಹೋರಾಟಗಾರರನ್ನು ಹತ್ತಿಕ್ಕುವ ಹಾಗೂ ಹಿಂದೂ ಧರ್ಮದ ಪರವಾಗಿ ಧ್ವನಿ ಎತ್ತುವವರನ್ನು ತುಳಿಯುವ ಕೆಲಸ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿದೆ.
ಬಿ.ಎಸ್. ಯಡಿಯೂರಪ್ಪ ಅವರು ನುಡಿದಂತೆ ನಡೆಯಲಿಲ್ಲ. ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ತಮ್ಮ ಪುತ್ರ ಕೆ.ಈ. ಕಾಂತೇಶ್ ಅವರಿಗೆ ಟಿಕೇಟ್ ಕೊಡಿಸುವ ಭರವಸೆ ನೀಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರದ ಕ್ಷೇತ್ರದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದೇನೆ. ಪ್ರಸ್ತುತ ಪಕ್ಷದ ಯಾವುದೇ ಹುದ್ದೆಯಲ್ಲೂ ಇಲ್ಲ. ಜೊತೆಗೆ ಅಧಿಕಾರದಲ್ಲಿಯೂ ಇಲ್ಲ. ಪಕ್ಷ ಸಂಘಟನೆಗಾಗಿ ಕಳೆದ ನಾಲ್ಕು ದಶಕದಿಂದ ಶ್ರಮಿಸಿದ್ದೇನೆ. ಪುತ್ರ ಕಾಂತೇಶ್ ಅವರಿಗೆ ಟಿಕೇಟ್ ಕೇಳಿದ್ದೆ ಅಷ್ಟೆ. ಇದೀಗ ಪಕ್ಷದಲ್ಲಿ ನಡೆಯುತ್ತಿರುವ ಕುಟುಂಬ ರಾಜಕಾರಣದ ವಿರುದ್ಧವಾಗಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯುವ ದಿಟ್ಟ ನಿರ್ಧಾರ ಎಂದರು.
ಮಾನಸಿಕವಾಗಿ
ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ದೆಹಲಿಯಲ್ಲಿ ಭೇಟಿಯಾಗಲು ಆಹ್ವಾನ ನೀಡಿದ್ದರು. ನಂತರ ಅವರ ಭೇಟಿ ಸಾಧ್ಯವಾಗಲಿಲ್ಲ. ಇದರಿಂದ ತಮ್ಮ ಸ್ಪರ್ಧೆಗೆ ಅವರು ಮಾನಸಿಕವಾಗಿ ಒಪ್ಪಿಗೆ ನೀಡಿದಂತೆ ತೋರುತ್ತಿದೆ. ಇದೇ ನನಗೆ ಲಾಭವಾಗುವ ಸಾಧ್ಯತೆ ಇದೆ. ತಮ್ಮ ಸ್ಪರ್ಧೆ ಏನಿದ್ದರೂ ಬಿಎಸ್ವೈ ಕುಟುಂಬ ರಾಜಕಾರಣದ ವಿರುದ್ಧವೇ ಹೊರತು. ಕೇಂದ್ರದ ವಿರುದ್ಧವಲ್ಲ. ಈಗಾಗಲೇ ಹಿಂದೂ ಪರ ಹೋರಾಟದ ಧ್ವನಿಗಳಾದ ಸಿ.ಟಿ. ರವಿ, ಬಸವರಾಜ ಗೌಡ ಯತ್ನಾಳ್, ಪ್ರತಾಪ್ ಸಿಂಹ ಅವರನ್ನು ಪಕ್ಷದಿಂದ ಬದಿಗಿರಿಸುವ ಕೆಲಸವನ್ನು ಮಾಡಲಾಗಿದೆ. ಅಂತಹ ನಾಯಕರಿಗೆ ನ್ಯಾಯ ದೊರಕಿಸಿಕೊಡಬೇಕು ಎನ್ನುವ ಬಲವಾದ ಉದ್ದೇಶ ಹೊಂದಿದ್ದೇನೆ ಎಂದರು.
ಏ.12 ರಂದು ತಾವು ನಾಮಪತ್ರ ಸಲ್ಲಿಸುತ್ತಿದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಿದ ಅವರು ನಾನು ಈಗಾಗಲೇ ಮೊದಲ ಸ್ಥಾನದಲ್ಲಿದ್ದೇನೆ. ಇನ್ನೇನಿದ್ದರೂ 2ನೇ ಸ್ಥಾನಕ್ಕೆ ಬಿ.ವೈ.ರಾಘವೇಂದ್ರ ಮತ್ತು ಗೀತಾ ಅವರ ನಡುವೆ ಪೈಪೋಟಿ ನಡೆಯಲಿದೆ ಎಂದರು.
ರಾಷ್ಟçಭಕ್ತ ಬಳಗದ ತಾಲೂಕು ಸಂಚಾಲಕ ಕೆ.ಪ್ರಭಾಕರ ರಾಯ್ಕರ್, ಜೆ.ಎಸ್ ಚಿದಾನಂದಗೌಡ, ಮಹೇಶ ಗೌಳಿ, ಅಣ್ಣಪ್ಪ, ಆರ್ಯ ಈಡಿಗ ಸಮಾಜದ ಮಹಿಳಾ ಜಿಲ್ಲಾಧ್ಯಕ್ಷೆ ಹೇಮಾ ರವಿ, ಮಂಜುನಾಥ ಸಾಗರ, ಪರಮೇಶ್ವರಪ್ಪ ಯಡಗೊಪ್ಪ, ಹರೀಶಗೌಡ, ಅಣ್ಣಾಜಿಗೌಡ ತಲಗುಂದ, ರವಿ ಗುಡಿಗಾರ್, ಗಣಪತಿ ಬಂಕಸಾಣ, ಕಿರಣ ಕುಮಾರ ಉದ್ರಿ, ಮತ್ತಿತರರಿದ್ದರು.
ವರದಿ: ಸಂದೀಪ ಯು.ಎಲ್, ಸೊರಬ