ಯುವನಿಧಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋದ ಶಾಸಕರು.
(CHIKKAMAGALURU): ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಘೋಷಣೆಯಾಗಿರುವ ಯುವನಿಧಿ ಯೋಜನೆ ಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ನಗರ ಸಜ್ಜಾಗಿದೆ ಸ್ವಾಮಿ ವಿವೇಕಾನಂದ ಜನ್ಮದಿನವಾದ ಶುಕ್ರವಾರ ಇಂದು ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು ಸುಮಾರು 85,000ಕ್ಕೂ ಅಧಿಕ ಜನರಿಗೆ ಆಸನ ವ್ಯವಸ್ಥೆಗಳು ಮಾಡಲಾಗಿದೆ. ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿ ಗಳಿಗೆ ಪ್ರತಿ ತಿಂಗಳು ಉದ್ಯೋಗ ಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯ ಈ ಯೋಜನೆ ಯಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಬಂಗಾರಪ್ಪ, ಡಾ. ಶರಣ ಪ್ರಕಾಶ್ ಪಾಟೀಲ್ , ಡಾ. ಎಂಸಿ ಸುಧಾಕರ ಚಲನೆ ನೀಡಲಿದ್ದಾರೆ.
ಈ ಕಾರ್ಯಕ್ರಮಕ್ಕೆ 22-2023 ರ ನಿರುದ್ಯೋಗಿ ಡಿಪ್ಲೋಮಾ ಮತ್ತು ಪದವೀಧರರನ್ನು ಕರೆದೊಯ್ಯ ಬೇಕಾಗಿದ್ದ ಶಾಸಕರು ಕಾಲೇಜು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳನ್ನು ಶೃಂಗೇರಿ ವಿಧಾನಸಭಾ ಶಾಸಕರು ಶಿವಮೊಗ್ಗ ಫ್ರೀಡಂ ಪಾರ್ಕ್ ನಲ್ಲಿ ನಡೆಯುವ ಯುವನಿಧಿ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಿದ್ದಾರೆ.
ಇದನ್ನು ಪ್ರಶ್ನೆ ಮಾಡಲು ಯಾರು ಇಲ್ಲವೆ ಎಂದು ವಿರೋಧ ಪಕ್ಷದ ಪ್ರಮುಖ ಮುಖಂಡರು ಪ್ರಶ್ನೆ ಮಾಡಿದ್ದಾರೆ.