ನ್ಯೂಸ್ಶಿವಮೊಗ್ಗ

ಸ್ಮಶಾನದಲ್ಲಿ ಹಣ ಡೀಲಿಂಗ್ ಮಾಡುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ತಗಲಾಕೊಂಡ ಅಧಿಕಾರಿ

ಸ್ಮಶಾನದಲ್ಲಿ ಹಣ ಡೀಲಿಂಗ್ ಮಾಡುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ತಗಲಾಕೊಂಡ ಅಧಿಕಾರಿ

(SHIVAMOGA): ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರೊಬ್ಬರು ಅಭಿವೃದ್ಧಿ ಹೆಸರಿನಲ್ಲಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಸ್ಮಶಾನದಲ್ಲಿ 15 ಸಾವಿರ ರೂಪಾಯಿ ಲಂಚ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತರ ಬಲೆಗೆ ಬಿದಿದ್ದಾರೆ.

ಪರಿಶೀಲನೆಯ ನಂತರ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗೋಪಿನಾಥ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಬುಕ್ಲಾಪುರ ಸ್ಮಶಾನದ ಕಾಮಗಾರಿ ಆರಂಭವಾಗಬೇಕಾಗಿದ್ದು, ಲಂಚದ ಪರಿಕಲ್ಪನೆ ತಪ್ಪು ಎಂದು ತಿಳಿದಿದ್ದರೂ ಕೂಡ ಬುಕ್ಲಾಪುರ ಸ್ಮಶಾನ ಕಾಮಗಾರಿಯ ಹಣ ಬಿಡುಗಡೆ ಹಾಗು ಸ್ಥಳ ಪರಿಶೀಲನೆ ಮಾಡಿ ರಿಪೋರ್ಟ್ ನೀಡಲು 15 ಸಾವಿರ ರೂಪಾಯಿಗೆ ಗೋಪಿನಾಥ್ ಬೇಡಿಕೆಯನ್ನು ಇಟ್ಟಿದ್ದರು.

ಇದಕ್ಕೆ ಸಂಬಂದಿಸಿದಂತೆ ಶಿವಮೊಗ್ಗ ಲೋಕಾಯುಕ್ತರಿಗೆ ದೂರು ದಾಖಲಾಗಿದ್ದು. ದಾಖಲಾದ ದೂರಿನ ಮುಖೇನಾ ಲೋಕಾಯುಕ್ತ ಡಿವೈಎಸ್‌ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಸ್ಮಶಾನದ ಕಾಮಗಾರಿ ಪರಿಶೀಲಿಸಿ ರಿಪೋರ್ಟ್ ಕೊಡುವ ವಿಷಯವಾಗಿ 15 ಸಾವಿರ ರೂಪಾಯಿ ಲಂಚ ಪಡೆಯುವ ಸಂದರ್ಬದಲ್ಲಿ ಗೋಪಿನಾಥ್ ರವರು ಪೋಲೀಸರ ಬಲೆಗೆ ಬಿದ್ದಿದ್ದಾರೆ. ಪೊಲೀಸರು ಟ್ರ್ಯಾಪ್ ಮಾಡುವ ಮೂಲಕ ಗೋಪಿನಾಥ್ ರವರನ್ನು ವಶಕ್ಕೆಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

Scan the code