ರಾಜ್ಯಕ್ಕೆ ಆರನೇ ಭಾಗ್ಯ ಕತ್ತಲೆ ಭಾಗ್ಯ – ರೈತ ಸಂಘದಿಂದ ತಲೆ ಮೇಲೆ ಕಲ್ಲು, ಬೆಳೆ ಹೊತ್ತು ಹೋರಾಟ
(KOLARA): ಬಂಗಾರಪೇಟೆ: ರಾಜ್ಯಕ್ಕೆ ಕತ್ತಲೇ 6 ನೇ ಬಾಗ್ಯ ನೀಡಿ ರೈತರ ಹಾಗೂ ವಿದ್ಯಾರ್ಥೀಗಳ ಜೀವನದ ಜೊತೆ ಚಲ್ಲಾಟವಾಡುತ್ತಿರುವ ಬೆಸ್ಕಾಂ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಂಡು ಕೃಷಿ ಕ್ಷೇತ್ರಕ್ಕೆ 12 ತಾಸು ಗುಣಮಟ್ಟದ ವಿದ್ಯುತ್ ನೀಡುವಂತೆ ರೈತ ಸಂಘದಿಂದ ತಲೆ ಮೇಲೆ ಕಲ್ಲು ಹೊತ್ತು ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಬೆಸ್ಕಾಂ ಸಚಿವರಿಗೆ ಅಧಿಕಾರಿಗಳ ಮುಖಾಂತರ ಮನವಿ ನೀಡಿ ಒತ್ತಾಯಿಸಲಾಯಿತು.
ಸಂಜೆ 6 ರಿಂದ 10 ಗಂಟೆಯವರೆಗೆ ವಿದ್ಯುತ್ ಖಡಿತ ಮಾಡಿ ರೈತರ ಹಾಗೂ ವಿದ್ಯಾರ್ಥಿಗಳ ಜೀವದ ಜೊತೆ ಚಲ್ಲಾಟವಾಡುತ್ತಿರುವ ಬೆಸ್ಕಂ ಅಧಿಕಾರಿಗಳಿಗೆ ಮುಖ್ಯ ಮಂತ್ರಿಗಳ ಪದಕ ನೀಡಿ ಸನ್ಮಾನ ಮಾಡುವವರೇ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ರೈತರು ಬೆಳೆದ ಅನ್ನ ತಿಂದು ರೈತ ವಿರೋಧಿ ದೋರಣೆ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಲಕ್ಷಾಂತರ ರೂಪಾಯಿ ಖಾಸಗಿ ಬಂಡವಾಳ ಹಾಕಿ ಬೆಳೆದಿರುವ ಬೆಳೆಗಳು ಕೈಗೆ ಬರುವ ಸಮಯದಲ್ಲಿ ಸಮರ್ಪಕವಾದ ವಿದ್ಯುತ್ ನೀಡದೆ ಬೆಳೆ ನಷ್ಟ ಒಂದು ಕಡೆಯಾದರೆ ಮತ್ತೊಂದು ಕಡೆ ರೋಗಗಳು ನಿಯಂತ್ರಣಕ್ಕೆ ಬಾರದೆ ಬೆಲೆ ಕುಸಿತದಿಂದ ಕಂಗಾಲಾಗಿರುವ ಟೊಮೇಟೊ ಹೂ, ಮತ್ತಿತರ ವಾಣಿಜ್ಯ ಬೆಳೆಗಳಿಗೆ ಬೆಸ್ಕಾಂ ಅಧಿಕಾರಿಗಳೇ ರೈತ ವಿರೋಧಿಗಳಾಗಿದ್ದಾರೆ. ಕಾರ್ಖಾನೆಗಳಿಗೆ ಶ್ರೀಮಂತರ ಖಾಸಗಿ ಕಾರ್ಯಕ್ರಮಗಳಿಗೆ ವಿದ್ಯುತ್ ನೀಡಲು ಯಾವುದೇ ಲೋಡ್ಷೆಡ್ಡಿಂಗ್ ಇರುವುದಿಲ್ಲ. ರೈತರಿಗೆ ವಿದ್ಯಾರ್ಥಿಗಳಿಗೆ ವಿದ್ಯುತ್ ನೀಡಬೇಕಾದರೆ ಬೆಸ್ಕಂ ಅಧಿಕಾರಿಗಳಿಗೆ ಪ್ರತಿ ವರ್ಷ ರೈತರು ಬೆಳೆದ ಅನ್ನ ತಿಂದು ರೈತರಿಗೆ ಗುಣಮಟ್ಟದ ವಿದ್ಯುತ್ ನೀಡಲು ಸಾಧ್ಯವಾಗದೆ ಇದ್ದರೆ, ಇನ್ನು ಬೆಸ್ಕಂ ಇಲಾಖೆ ಇದ್ದು ಪ್ರಯೋಜನವೇನೆಂದು ಪ್ರಶ್ನೆ ಮಾಡಿದರು.
ಒಂದು ಕಡೆ ಬೆಲೆ ಕುಸಿತ ಮತ್ತೊಂದು ಕಡೆ ವಿದ್ಯುತ್ ಸಮಸ್ಯೆಯಿಂದ ರೈತರು ಬೀದಿಗೆ ಬಿದ್ದರೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನ ಪ್ರತಿನಿಧಿಗಳು ವಿದ್ಯುತ್ ಶಾಕ್ ಹೊಡೆದು ನಾಪತ್ತೆಯಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಕದರಿನತ್ತ ಅಪ್ಪೋಜಿರಾವ್ ಹಸಿರು ಸೇನೆ ಜಿಲ್ಲಾಧ್ಯಕ್ಷ ಕಿರಣ್, ಜಿಲ್ಲಾ ಉಪಾಧ್ಯಕ್ಷ ಚಾಂದ್ಪಾಷ, ಮರಗಲ್ ಮುನಿಯಪ್ಪ, ಸುಪ್ರಿಂ ಚಲ, ಯಾರಂಘಟ್ಟ ಗಿರೀಶ್, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಗಸಂದ್ರ ತಿಮ್ಮಣ್ಣ, ರಾಮಸಾಗರ ವೇಣು, ಸುರೇಶ್ಬಾಬು, ಕಾಮಸಮುದ್ರ ಹೋಬಳಿ ಅಧ್ಯಕ್ಷ ಮುನಿಕೃಷ್ಣ, ವಿಶ್ವ, ಮುನಿರಾಜು, ರತ್ನಮ್ಮ, ಶೈಲಜ, ವೆಂಕಟಮ್ಮ, ಮುಂತಾದವರು ಇದ್ದರು.
ವರದಿ: ವಿಷ್ಣು ಕೋಲಾರ