ರಾಷ್ಟ್ರಭಕ್ತರ ಬಳಗದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ –ಕೆ.ಪ್ರಭಾಕರ ರಾಯ್ಕರ್ ಸ್ಪಷ್ಟನೆ
(SHIVAMOGA): ಸೊರಬ: ತಾಲೂಕಿನ ರಾಷ್ಟ್ರಭಕ್ತರ ಬಳಗದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯುತ್ತಿದ್ದು, ಕೆ.ಎಸ್. ಈಶ್ವರಪ್ಪನ ಗೆಲುವು ಖಚಿತ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಪ್ರಭಾಕರ ರಾಯ್ಕರ್ ಸ್ಪಷ್ಟಪಡಿಸಿದ್ದಾರೆ.
ಕೆಲ ಮಾಧ್ಯಮಗಳಲ್ಲಿ ಸೊರಬ ತಾಲೂಕಿನ ರಾಷ್ಟ್ರಭಕ್ತರ ಬಳಗದಲ್ಲಿ ಬಿನ್ನಾಭಿಪ್ರಾಯ ಬಂದಿದ್ದು, ಕೆಲವರು ಹೊರಬಂದಿದ್ದಾರೆ ಎಂದು ಸುದ್ದಿ ಪ್ರಕಟವಾದ ಬಗ್ಗೆ ಪ್ರತಿಕ್ರಿಯಿಸಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾಲೂಕಿನ ಎಲ್ಲಾ ಹೋಬಳಿಗಳಲ್ಲಿ ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ಒಗ್ಗಟ್ಟಿನಿಂದ ಅತ್ಯುತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಕೆ.ಎಸ್. ಈಶ್ವರಪ್ಪನವರ ಗೆಲುವು ನಿಶ್ಚಿತ ಎಂಬ ಭಾವನೆ ಕಾರ್ಯಕರ್ತರಲ್ಲಿ ಬಂದಿದೆ. ಸೊರಬ ಮತ್ತು ಆನವಟ್ಟಿಯಲ್ಲಿ ನಡೆದ ಕಾರ್ಯಕರ್ತರ ಸಭೆಗಳನ್ನು ನೋಡಿದ ಮೇಲೆ ಕೆಲವೊಬ್ಬ ಮೀರ್ ಸಾಧಕರಿಗೆ ಹೊಟ್ಟೆಯಲ್ಲಿ ಕಸಿವಿಸಿಯಾಗಿ ತಡೆಯಲಾಗದೇ ಬಿನ್ನಾಭಿಪ್ರಾಯ ಬಂಧಿದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸುವಲ್ಲಿ ನಿರತರಾಗಿದ್ದಾರೆ. ಇವರಿಗೆ ಹಿಂದಿನಿoದ ಯಾರ ಚಿತಾವಣೆ ಇದೆ ಎಂಬುದು ಎಲ್ಲರಿಗೂ ಗೊತ್ತಾಗಿದೆ. ತಾಲೂಕಿನಲ್ಲಿ ಕೆ.ಎಸ್. ಈಶ್ವರಪ್ಪನವರು ಅತೀ ಹೆಚ್ಚು ಮತಗಳನ್ನು ಪಡೆದು ಗೆಲುವು ಸಾಧಿಸುವುದು ಶತಸಿದ್ದ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘದ ಅಧ್ಯಕ್ಷೆ ಹೇಮಾ ರವಿ, ಪುರಸಭೆ ಮಾಜಿ ಸದಸ್ಯ ಮಹೇಶ ಗೌಳಿ, ಅಣ್ಣಪ್ಪ, ಪ್ರಶಾಂತ್, ಕೃಷ್ಣಪ್ಪ, ಶಿವಪ್ಪ ಎಂ. ದ್ವಾರಹಳ್ಳಿ ಉಪಸ್ಥಿತರಿದ್ದರು.
ವರದಿ: ಸಂದೀಪ ಯು.ಎಲ್. ಸೊರಬ